ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿ ಲೇಡಿ ದಾಖಲಿಸಿರುವ ಅತ್ಯಾಚಾರ ಕೇಸ್ನ ತನಿಖಾಧಿಕಾರಿ ಬದಲಾಗಿದ್ದಾರೆ.
ಈ ಹಿಂದೆ ಕಬ್ಬನ್ಪಾರ್ಕ್ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮಾರುತಿ ತನಿಖೆ ನಡೆಸುತ್ತಿದ್ದರು. ಪ್ರಕರಣದ ತನಿಖೆ ನಡೆಸಲು ಎಸಿಪಿ ಕವಿತಾ ಅವರನ್ನು ನೇಮಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಸಂಚಾರಿ ಎಸಿಪಿಯಾಗಿರುವ ನೂತನ ತನಿಖಾಧಿಕಾರಿ ಕವಿತಾ, ವಿಚಾರಣೆಗೆ ಹಾಜರ್ ಆಗುವಂತೆ ಯುವತಿಗೆ ನೋಟಿಸ್ ನೀಡಿದ್ದಾರೆ.
ಇತ್ತ ಸಿಡಿ ಲೇಡಿ ಪ್ರಕರಣವನ್ನ 1ನೇ ಎಸಿಎಂಎಂ ಕೋರ್ಟ್ಗೆ ವರ್ಗಾವಣೆಯಾಗಿದ್ದು, ಇಂದು ಮಧ್ಯಾಹ್ನ ಕೋರ್ಟ್ಗೆ ಸಿಡಿ ಲೇಡಿ ಬರುವ ಸಾಧ್ಯತೆ ಇದೆ.
ಬೆಳಗಾವಿ ಇಂದು ರಮೇಶ್ ಜಾರಕಿಹೊಳಿ ಭೇಟಿ? 60ಕ್ಕೂ ಹೆಚ್ಚು ಕಾರುಗಳಲ್ಲಿ ಬಂದ ಬೆಂಬಲಿಗರು