ನವದೆಹಲಿ: ಭಾರತದ ಸೇನಾ ಪಡೆಗಳ ಮುಖ್ಯಸ್ಥರಾಗಿದ್ದ ಜನರಲ್ ಬಿಪಿನ್ ರಾವತ್ ಅವರ ಅಂತ್ಯಸಂಸ್ಕಾರವು ಶುಕ್ರವಾರ ಸಂಜೆಯ ವೇಳೆಗೆ ದೆಹಲಿ ಕಂಟೋನ್ಮೆಂಟಿನಲ್ಲಿರುವ ಬ್ರಾರ್ ಸ್ಕ್ವೇರ್ ಕ್ರೆಮೆಟೋರಿಯಂನಲ್ಲಿ ನಡೆಯಿತು. ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಜನರಲ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಅವರ ಅಂತ್ಯಕ್ರಿಯೆಯನ್ನು ಒಂದೇ ಜಾಗದಲ್ಲಿ ನೆರವೇರಿಸಲಾಯಿತು. ಅವರ ಚಿತೆಗೆ ಪುತ್ರಿಯರಾದ ಕ್ರಿತಿಕಾ ಮತ್ತು ತಾರಿಣಿ ಅಗ್ನಿಶಾಸ್ತ್ರ ಮಾಡಿದರು.
ಇಡೀ ದೇಶವೇ ಶೋಕದಲ್ಲಿ ಮುಳುಗಿ ಚೀಫ್ ಆಫ್ ಡಿಫೆನ್ಸ್ ಸ್ಟಾಫ್(ಸಿಡಿಎಸ್) ಜನರಲ್ ಬಿಪಿನ್ ರಾವತ್ ಅವರಿಗೆ ಅಂತಿಮ ವಿದಾಯ ಸೂಚಿಸಿದೆ. ಇಂದು ಮಧ್ಯಾಹ್ನ ಅವರ ನಿವಾಸದಿಂದ ರಾವತ್ ದಂಪತಿಗಳ ಪಾರ್ಥಿವ ಶರೀರಗಳನ್ನು ಸಕಲ ಸರ್ಕಾರಿ ಗೌರವದೊಂದಿಗೆ, ಮೆರವಣಿಗೆಯಲ್ಲಿ ಬ್ರಾರ್ ಸ್ಕ್ವೇರ್ ಸ್ಮಶಾನಕ್ಕೆ ತರಲಾಯಿತು. ಅಂತ್ಯಕ್ರಿಯೆಯ ಸಮಯಕ್ಕೆ ದೇಶದ ವೀರ ಸೇನಾನಿ ಜ.ರಾವತ್ಗೆ ಸೇನೆಯ ಪರವಾಗಿ 17 ತೋಪುಗಳ ಸಲ್ಯೂಟ್(ಕುಶಾಲತೋಪು) ನೀಡಿ ಗೌರವ ಅರ್ಪಿಸಲಾಯಿತು.
#WATCH | Delhi: #CDSGeneralBipinRawat laid to final rest with full military honours, 17-gun salute. His last rites were performed along with his wife Madhulika Rawat, who too lost her life in #TamilNaduChopperCrash.
Their daughters Kritika and Tarini performed their last rites. pic.twitter.com/uTECZlIhI0
— ANI (@ANI) December 10, 2021
ದಿವಂಗತ ರಾವತ್ ಅವರ ಚಿತಾಭಸ್ಮವನ್ನು ಅವರ ಕುಟುಂಬಸ್ಥರು ಶನಿವಾರದಂದು ಹರಿದ್ವಾರಕ್ಕೆ ತೆಗೆದುಕೊಂಡು ಹೋಗಲಿದ್ದಾರೆ ಎಂದು ವರದಿಗಳು ತಿಳಿಸಿವೆ.
ಶಾಲೆಯಲ್ಲಿ ಮೊಟ್ಟೆ ಕೊಡುವುದಕ್ಕೆ ವಿರೋಧ: ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದೇನು?
ಓ ವಿಧಿಯೇ ನೀನೆಷ್ಟು ಕ್ರೂರಿ… ಶವಪೆಟ್ಟಿಗೆಗೆ ಮುತ್ತಿಟ್ಟು ಕಣ್ಣೀರಿಟ್ಟ ಬ್ರಿಗೇಡಿಯರ್ ಲಿಡ್ಡರ್ ಪತ್ನಿ