More

    ಜಮ್ಮು ಮತ್ತು ಕಾಶ್ಮಿರ ಕೇಂದ್ರಾಡಳಿತಕ್ಕೆ ಒಂದು ವರ್ಷ ಪೂರೈಸಿದ ಸಂಭ್ರಮ; ವಿಶೇಷತೆ ಏನು?

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಆಗಸ್ಟ್ 5 ರಂದು ಕೇಂದ್ರಾಡಳಿತ ಪ್ರದೇಶವಾಗಿ ಒಂದು ವರ್ಷವನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಎರಡು ವಾರಗಳಲ್ಲಿ ದೇಶದ ವಿವಿಧ ಭಾಗಗಳಿಂದ ಜಮ್ಮು ಮತ್ತು ಕಾಶ್ಮಿರಕ್ಕೆ ಭೇಟಿ ನೀಡುವ ಮಾಧ್ಯಮ ತಂಡಗಳೊಂದಿಗೆ ಸಮನ್ವಯ ಸಾಧಿಸಲು ಇಲ್ಲಿಯ ಆಡಳಿತವು ಐವರು ಹಿರಿಯ ಐಎಎಸ್ ಅಧಿಕಾರಿಗಳನ್ನು ನೇಮಿಸಿದೆ.
    ಈ ಕುರಿತು ಸಾರ್ವಜನಿಕ ಆಡಳಿತ ಇಲಾಖೆ ಬುಧವಾರ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.
    ಹಲವು ಮಾಧ್ಯಮ ತಂಡಗಳು ಕೇಂದ್ರಾಡಳಿತ ಪ್ರದೇಶದಲ್ಲಿನ ಬೆಳವಣಿಗೆಗಳ ಬಗ್ಗೆ ವರದಿ ಮಾಡಲು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.

    ಫೋಟೋ:  ಬಹು ನಿರೀಕ್ಷಿತ ಯುಪಿಎಸ್​ಸಿ -ಸಿಎಂಎಸ್ ಪರೀಕ್ಷಾ ಅಧಿಸೂಚನೆ ಪ್ರಕಟ

    ಕಳೆದ ಒಂದು ವರ್ಷದಲ್ಲಿ ಆಗಿರುವ ಸಕಾರಾತ್ಮಕ ಬದಲಾವಣೆಗಳು ಹಾಗೂ ಆಡಳಿತದ ದೃಷ್ಟಿಕೋನವನ್ನು ಪ್ರಮುಖವಾಗಿ ಬಿತ್ತರಿಸಲು ಭೇಟಿ ನೀಡುವ ಪತ್ರಕರ್ತರು ಅಧಿಕಾರಿಗಳೊಂದಿಗೆ ಸಂವಹನ ನಡೆಸಲಿದ್ದಾರೆ.
    ಈ ಸಂದರ್ಭದಲ್ಲಿ ಕೆಲ ನಾಗರಿಕ ಸಮಾಜ ಕಾರ್ಯಕರ್ತರನ್ನೂ ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

    2030ರ ವೇಳೆಗೆ ಶಿಕ್ಷಕ ವೃತ್ತಿಯ ಕನಿಷ್ಠ ಶೈಕ್ಷಣಿಕ ಅರ್ಹತೆ ಬದಲು: ಹೊಸ ಅರ್ಹತೆ ಏನು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts