ಸಂಭ್ರಮದ ಬೀರೇಶ್ವರ ರಥೋತ್ಸವ

Celebration of Beereshwar Rathotsava

ಕುಳಗೇರಿ ಕ್ರಾಸ್: ಗ್ರಾಮದ ಭಂಡಾರದೊಡೆಯ ಬೀರೇಶ್ವರನ 66ನೇ ರಥೋತ್ಸವ ಭಾನುವಾರ ಸಂಜೆ ಭಕ್ತರ ಹರ್ಷೋದ್ಗಾರದೊಂದಿ ಸಂಭ್ರಮದಿಂದ ನಡೆಯಿತು.

ಬೆಳಗ್ಗೆಯಿಂದ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಅಭಿಷೇಕ, ವಿಶೇಷ ಪೂಜೆ ಪುನಸ್ಕಾರ ನೆರವೇರಸಿದರು.

ಜಾತ್ರೆಯಲ್ಲಿ ಭಕ್ತರು ಚೀಲಗಟ್ಟಲೇ ಭಂಡಾರ ಎರಚಿ ಹರಕೆ ತೀರಿಸಿದರು. ಭಕ್ತಿಯಿಂದ ಬೀರೇಶ್ವರನ ತೇರು ಎಳೆದು ಸಂತಸದಿಂದ ಚಪ್ಪಾಳೆ ತಟ್ಟಿ, ಭಕ್ತಿ ಭಾವ ಸಮರ್ಪಿಸಿದರು. ರಥೋತ್ಸವದಲ್ಲಿ ನೂರಾರು ಜನರು ಪಾಲ್ಗೊಂಡಿದ್ದರು.

ಪ್ರತಿ ಮನೆಯ ಮುಂದೆ ಮಹಿಳೆಯರು ರಂಗೋಲಿ ಹಾಕಿ, ಹಸಿರು ತೋರಣಗಳಿಂದ ಮನೆ ಶೃಂಗರಿಸಿದ್ದರು. ಗ್ರಾಮದಲ್ಲಿ ಹಬ್ಬದ ವಾತಾವರಣವೇ ಏರ್ಪಟ್ಟಿತ್ತು.

Share This Article

ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…

ಟೊಮೆಟೊ ಸೇವನೆ ಕ್ಯಾನ್ಸರ್​ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips

ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್​​.…

ಚಳಿಗಾಲದಲ್ಲಿ ಅಲೋವೆರಾ ಜೆಲ್ ಅನ್ನು ತಲೆಗೆ ಹಚ್ಚಿಕೊಳ್ಳಬಹುದೇ? aloe vera gel benefits

aloe vera gel benefits : ಚಳಿಗಾಲದಲ್ಲಿ ತಲೆಹೊಟ್ಟು ಸಾಮಾನ್ಯ. ಚಳಿಗಾಲದಲ್ಲಿ ಶುಷ್ಕ ಗಾಳಿಯು ನಮ್ಮ…