More

    ಸ್ಮಶಾನ ಭೂಮಿ ಒದಗಿಸಲು ಮನವಿ

    ಬೆಳಗಾವಿ: ತಾಲೂಕಿನ ಅಷ್ಟೆ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಸಮುದಾಯದಕ್ಕೆ ಸ್ಮಶಾನ ಭೂಮಿ ಒದಗಿಸುವಂತೆ ಒತ್ತಾಯಿಸಿ ಡಾ. ಬಿ.ಆರ್. ಅಂಬೇಡ್ಕರ್ ಶಕ್ತಿ ಸಂಘದ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

    ಅಷ್ಟೆ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿರುವ ಐದು ಗುಂಟೆ ಸಶ್ಮಾನದಲ್ಲಿ ಪೂರ್ವಜರು ಅಂತ್ಯಸಂಸ್ಕಾರ ಮಾಡುತ್ತಿದ್ದರು. ಆದರೆ, ಇತ್ತೀಚೆಗೆ ಇತರೆ ಸಮುದಾಯದವರು ವಶಪಡಿಸಿಕೊಂಡು ಅವರು ಮಾತ್ರ ಬಳಕೆ ಮಾಡುತ್ತಿದ್ದಾರೆ. ಪರಿಶಿಷ್ಟ ಜಾತಿ ಸಮುದಾಯ ಜನರ ಅಂತ್ಯ ಸಂಸ್ಕಾರಕ್ಕೆ ಸಶ್ಮಾನ ಸಮಸ್ಯೆಯಾಗುತ್ತಿದೆ.

    ಹಾಗಾಗಿ ಪರಿಶಿಷ್ಟ ಜಾತಿಗೆ ಸೇರಿರುವ ಸಶ್ಮಾನ ಭೂಮಿಯನ್ನು ಇತರೆ ಸಮುದಾಯದವರಿಂದ ಮರಳಿ ಒದಗಿಸಬೇಕು ಎಂದು ಮನವಿ ಮೂಲಕ ಒತ್ತಾಯಿಸಿದರು. ಶಕ್ತಿ ಸಂಘದ ಅಧ್ಯಕ್ಷ ಪ್ರಕಾಶ ಕೋಲಕಾರ, ಸಂತೋಷ ಕೋಲಕಾರ, ಶಂಕರ ಕೋಲಕಾರ, ಲಕ್ಷ್ಮಣ ಮೇತ್ರಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts