ನವದೆಹಲಿ: ರಾಷ್ಟ್ರದಲ್ಲಿ ಕರೊನಾ ಸೋಂಕು ಹರಡದಂತೆ ತಡೆಯಲು ರಾಜ್ಯ ವಿಪತ್ತು ನಿರ್ವಹಣಾ ನಿಧಿಯಡಿ (ಎಸ್ಡಿಆರ್ಎಂಎಫ್) ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ 11,092 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಸಿಎಂಗಳ ಜತೆ ನಡೆಸಿದ್ದ ವಿಡಿಯೋ ಕಾನ್ಫರೆನ್ಸಿಂಗ್ನಲ್ಲಿ ಅನುದಾನ ಒದಗಿಸುವ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ 11,0092 ಕೋಟಿ ರೂ. ಅನುದಾನ ಬಿಡುಗಡೆಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಶುಕ್ರವಾರ ಅನುಮೋದನೆ ನೀಡಿದ್ದಾರೆ.
ಈ ನಿಧಿಯನ್ನು ಬಳಸಿಕೊಂಡು ರಾಜ್ಯ ಸರ್ಕಾರಗಳು ಕ್ವಾರಂಟೈನ್ ಸೌಲಭ್ಯ ಕಲ್ಪಿಸಬಹುದು. ರಕ್ತ ಮತ್ತು ಗಂಟಲು ದ್ರವ ಮಾದರಿ ಸಂಗ್ರಹ ಮತ್ತು ಪರಿಶೀಲನೆ, ಹೆಚ್ಚುವರಿ ಪ್ರಯೋಗಾಲಯಗಳ ಸ್ಥಾಪನೆ, ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿ, ಪೊಲೀಸ್, ಮುನ್ಸಿಪಲ್ ಮತ್ತು ಅಗ್ನಿಶಾಮಕದಳ ಸಿಬ್ಬಂದಿಗೆ ರಕ್ಷಣಾ ಕವಚಗಳ ಖರೀದಿ, ಥರ್ಮಲ್ ಸ್ಕ್ಯಾನರ್ಗಳ ಖರೀದಿ, ವೆಂಟಿಲೇಟರ್, ಗಾಳಿ ಶುದ್ಧಗೊಳಿಸುವ ಯಂತ್ರಗಳು ಮತ್ತು ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯವಾದ ವಸ್ತುಗಳ ಖರೀದಿಗೆ ಈ ನಿಧಿಯನ್ನು ಬಳಸಬಹುದಾಗಿದೆ.
ಬ್ರಿಟನ್ ರಾಜಕುಮಾರ ಚಾರ್ಲ್ಸ್ ಕರೊನಾ ಸೋಂಕಿಗೆ ಆಯುರ್ವೇದ ಔಷಧಿ ಪಡೆದಿಲ್ಲ: ರಾಜಮನೆತನದ ವಕ್ತಾರರ ಸ್ಪಷ್ಟನೆ