ನವದೆಹಲಿ: ಬಾಲಿವುಡ್ ನಟರಾಗಿದ್ದ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆ ಪ್ರಕರಣವನ್ನು ಬಳಸಿಕೊಂಡು ಬಿಹಾರ ಸರ್ಕಾರದ ನೆರವಿನಿಂದ ಕೇಂದ್ರ ಸರ್ಕಾರ ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ. ಅಲ್ಲದೆ, ಆ ಕಳಂಕವನ್ನು ಉದ್ಧವ್ ಠಾಕ್ರೆ ನೇತೃತ್ವದ ಎಂವಿಎ ಸರ್ಕಾರಕ್ಕೆ ಅಂಟಿಸಲು ಹುನ್ನಾರ ನಡೆಸಿದೆ ಎಂದು ಶಿವಸೇನೆಯ ಮುಖಂಡ ಸಂಜಯ್ ರಾವತ್ ಆರೋಪಿಸಿದ್ದಾರೆ.
ಭಾನುವಾರ ಸುದ್ದಿಗಾರರ ಜತೆ ಮಾತನಾಡಿರುವ ಅವರು ಸುಶಾಂತ್ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ಸತ್ಯವನ್ನು ಬಹಿರಂಗಪಡಿಸುವ ಸಾಮರ್ಥ್ಯ ಮುಂಬೈ ಪೊಲೀಸರಿಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಅಳಿಯನ ಕಿರುಕುಳ ತಾಳದ ತಂದೆ ನೇಣಿಗೆ ಕೊರಳೊಡ್ಡಿದ… ತಂದೆಯ ಸಾವನ್ನು ಅರಗಿಸಿಕೊಳ್ಳದ ಮಕ್ಕಳು ರೈಲಿಗೆ ತಲೆಯೊಡ್ಡಿದರು.
ಸುಶಾಂತ್ ಪ್ರಕರಣದ ಕುರಿತು ಬಿಹಾರ ಪೊಲೀಸರು ಕೂಡ ತನಿಖೆ ನಡೆಸುತ್ತಿದ್ದಾರೆ. ಇದಕ್ಕೂ ಮೊದಲೇ ಮುಂಬೈ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದರು. ಒಂದೇ ಪ್ರಕರಣದ ತನಿಖೆಯನ್ನು ಎರಡು ಪೊಲೀಸ್ ಪಡೆಯವರು ಮಾಡಿದರೆ ಗೊಂದಲ ಉಂಟಾಗಿ ಆಯೋಮಯ ಸ್ಥಿತಿ ನಿರ್ಮಾಣವಾಗಬಹುದು ಎಂದು ಮುಂಬೈ ಪೊಲೀಸರು ಸುಪ್ರೀಂಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿದ ಬೆನ್ನಲ್ಲೇ ಸಂಜಯ್ ರಾವತ್ ಈ ಹೇಳಿಕೆ ನೀಡಿರುವುದು ಗಮನಾರ್ಹ.
ಬಿಹಾರ ಸರ್ಕಾರ ಮನವಿ ಮಾಡಿಕೊಂಡಿತು ಎಂಬ ಒಂದೇ ಕಾರಣಕ್ಕಾಗಿ ಸಿಬಿಐ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿಕೊಳ್ಳಬಾರದಿತ್ತು ಎಂದು ಮುಂಬೈ ಪೊಲೀಸರು ಸುಪ್ರೀಂಕೋರ್ಟ್ಗೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಉಲ್ಲೇಖಿಸಿದ್ದರು ಎನ್ನಲಾಗಿದೆ.
ಮರ್ಯಾದೆಗೇಡು ಹತ್ಯೆ ಮಾಡಿ ತರಾತುರಿಯಲ್ಲಿ ಅಂತ್ಯಸಂಸ್ಕಾರಕ್ಕೆ ಯತ್ನ; ಪೊಲೀಸರಿಗೆ ಸಿಕ್ಕಿದ್ದಾದರೂ ಏನು?