More

    ಕೇಜ್ರಿವಾಲ್ ಬಂಧನದ ಹಿಂದೆ ಕೇಂದ್ರದ ಕುತಂತ್ರ

    ರಾಯಚೂರು: ಕೇಂದ್ರ ಸರ್ಕಾರ ದುರುದ್ದೇಶದಿಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಸಿರುವುದನ್ನು ಖಂಡಿಸಿ ಸ್ಥಳೀಯ ಜಿಲ್ಲಾಕಾರಿ ಕಚೇರಿ ಮುಂದೆ ಆಮ್ ಆದ್ಮಿ ಪಕ್ಷದ ಜಿಲ್ಲಾ ಘಟಕದಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
    ನಂತರ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ಕೇಜ್ರಿವಾಲ್ ಬಂಧನ ಲೋಕತಂತ್ರದ ಹತ್ಯೆಯಾಗಿದ್ದು, ನಿಯಮಗಳನ್ನು ಗಾಳಿಗೆ ತೂರಿ ಬಂಸಲಾಗಿದೆ. ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
    ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ಸಿಬಿಐ ಮತ್ತು ಇಡಿ ಇಲಾಖೆಯನ್ನು ಬಳಸಿಕೊಂಡು ಕೇಜ್ರಿವಾಲ್‌ರನ್ನು ಬಂಸಿದೆ. ಕೇಜ್ರಿವಾಲ್ ಪ್ರಚಾರ ನಡೆಸಿದರೆ ಪಕ್ಷಕ್ಕೆ ಹೊಡೆತ ಬೀಳುತ್ತದೆ ಎಂದು ಚುನಾವಣೆಯಲ್ಲಿ ಎದುರಾಳಿಗಳು ಇಲ್ಲದಂತೆ ಮಾಡಲು ಬಿಜೆಪಿ ಕುತಂತ್ರ ನಡೆಸಿದೆ.
    ದೇಶದಲ್ಲಿನ ಆಮ್‌ಆದ್ಮಿ ಬೆಳವಣಿಗೆ ಹಾಗೂ ಕೇಜ್ರಿವಾಲರ ಪ್ರಭಾವ ಹೆಚ್ಚುತ್ತಿರುವುದು ಬಿಜೆಪಿಗೆ ಸಹಿಸಿಕೊಳ್ಳಲು ಸಾಧ್ಯವಾಗದೆ ಕೇಜ್ರಿವಾಲ್‌ರನ್ನು ಬಂಸುವ ಕೆಲಸವನ್ನು ಮಾಡಲಾಗಿದೆ. ಸುಪ್ರೀಂ ಕೋರ್ಟ್ ಮಧ್ಯೆ ಪ್ರವೇಶಿಸಿ ಕೇಜ್ರಿವಾಲ್ ಬಿಡುಗಡೆಗೆ ಸೂಚನೆ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
    ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಡಿ.ವೀರೇಶಕುಮಾರ, ಪದಾಕಾರಿಗಳಾದ ಆನಂದ, ಸೈಯದ್ ನೂಸ್ರತ್ ಅಲಿ, ಮಕ್ಬೂಲ್ ಪಾಷಾ, ಶೇಖ್ ಖಾದರ್ ಪಾಷಾ, ಸುನೀಲ್, ವೀರೇಶ, ಸಂಗಪ್ಪ, ಸೈಯದ್ ಬದ್ರಿ, ಡಾ.ಮಜೀದ್ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts