ನವದೆಹಲಿ: ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು ಹಾಗೂ ಪುದುಚೇರಿ ವಿಧಾನಸಭೆಗೆ ಚುನಾವಣಾ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಲಿದೆ.
ಇಂದು ಸಂಜೆ 4.30 ಕ್ಕೆ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯಕ್ತ ಸುನೀಲ್ ಅರೋರಾ ಅವರು ವೇಳಾಪಟ್ಟಿ ಪ್ರಕಟಿಸಲಿದ್ದಾರೆ.
ಕರೊನಾ ಸಂಕಷ್ಟದಲ್ಲಿ ಇದೇ ಮೊದಲ ಬಾರಿಗೆ ದೇಶದಲ್ಲಿ ಇಷ್ಟು ದೊಡ್ಡ ಮಟ್ಟದ ಚುನಾವಣೆ ನಡೆಯುತ್ತಿದೆ. ಬಿಹಾರ ಚುನಾವಣೆಯನ್ನು ಯಶಸ್ವಿಯಾಗಿ ನಿಭಾಯಿಸಿದ್ದರಿಂದ ಕೇಂದ್ರ ಚುನಾವಣಾ ಆಯೋಗ ಈ ಐದು ವಿಧಾನಸಭೆಗಳ ಚುನಾವಣೆಯನ್ನೂ ಯಶಸ್ವಿಯಾಗಿ ನಡೆಸುವ ಉಮೇದಿನಲ್ಲಿದೆ. ಏಪ್ರೀಲ್ ಮೇ ನಲ್ಲಿ ಚುನಾವಣೆಗಳು ನಡೆಯಲಿವೆ ಎನ್ನಲಾಗುತ್ತಿದೆ.
ಅಣ್ಣ ಬುದ್ಧಿಹೇಳಿದ ಎಂದು ತಮ್ಮನ ಆತ್ಮಹತ್ಯೆ… ಸಾವಿನ ಸುದ್ದಿ ಕೇಳಿ ಅಣ್ಣನೂ ನೇಣಿಗೆ ಶರಣು!