More

    ರೈತರ ಹೋರಾಟಕ್ಕೆ ತಮಟೆ ಬಾರಿಸಿ ಬೆಂಬಲ

    ಶಿವಮೊಗ್ಗ: ಕೇಂದ್ರ ಸರ್ಕಾರ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ದೆಹಲಿಯಲ್ಲಿ ರೈತರ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿದ ಜಿಲ್ಲಾ ಎನ್​ಎಸ್​ಯುುಐ ಪದಾಧಿಕಾರಿಗಳು ಭಾನುವಾರ ಶಿವಪ್ಪ ನಾಯಕ ವೃತ್ತದಲ್ಲಿ ತಮಟೆ ಬಾರಿಸುವ ಮುಖಾಂತರ ಪ್ರತಿಭಟನೆ ನಡೆಸಿದರು.

    ದೆಹಲಿಯಲ್ಲಿ ರೈತರ ಹೋರಾಟ ಬೆಂಬಲಿಸಿ ಭಾರತೀಯ ಕಿಸಾನ್ ಯೂನಿಯನ್ ಕರೆ ನೀಡಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ವೇಳೆ ಎನ್​ಎಸ್​ಯುುಐ ಪದಾಧಿಕಾರಿಗಳು ತಟ್ಟೆ ಬಾರಿಸಿ ಆಕ್ರೋಶ ವ್ಯಕ್ತಪಡಿಸಿದರು.

    ಕಳೆದೊಂದು ತಿಂಗಳಿಂದ ರೈತರು 3 ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ಪ್ರತಿಭಟಿಸುತ್ತಿದ್ದಾರೆ. ಇಡೀ ದೇಶಾದ್ಯಂತ ಕೃಷಿ ಕಾಯ್ದೆಗಳನ್ನು ಕೈಬಿಡುವಂತೆ ಲಕ್ಷಾಂತರ ರೈತರು ಒತ್ತಾಯಿಸಿದ್ದಾರೆ. ಆದರೂ ಕೇಂದ್ರ ಸರ್ಕಾರ ಹಠಮಾರಿ ಧೋರಣೆ ತಾಳಿದೆ ಎಂದು ಕಿಡಿಕಾರಿದರು.

    ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳ ತಿದ್ದುಪಡಿಯಿಂದ ಸಣ್ಣ ಮತ್ತು ಅತಿ ಸಣ್ಣ ರೈತರು ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಾರೆ. ಕೇಂದ್ರ ಸರ್ಕಾರವು ಬಂಡವಾಳಶಾಹಿಗಳು ಹಾಗೂ ಉದ್ಯಮಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ತೀರ್ಮಾನ ತೆಗೆದುಕೊಳ್ಳುತ್ತಿದೆ ಎಂದು ದೂರಿದರು.

    ಎನ್​ಎಸ್​ಯುುಐ ರಾಜ್ಯ ಉಪಾಧ್ಯಕ್ಷ ಕೆ.ಚೇತನ್, ಜಿಲ್ಲಾಧ್ಯಕ್ಷ ಎಚ್.ಎಸ್.ಬಾಲಾಜಿ, ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷರಾದ ಮಧುಸೂದನ್, ಮಹಮ್ಮದ್ ನಿಹಾಲ್, ಎನ್​ಎಸ್​ಯುುಐ ಕಾರ್ಯಾಧ್ಯಕ್ಷ ವಿನಯ್, ನಗರಾಧ್ಯಕ್ಷ ವಿಜಯ್, ಗ್ರಾಮಾಂತರ ಅಧ್ಯಕ್ಷ ರವಿ, ವಿನ್ಯಾಸ್, ಮಂಜು ಪುರಲೆ, ಮಹಮದ್ ನಿಹಾಲ್, ಅಬ್ದುಲ್ ಸತ್ತರ, ಗಿರೀಶ್, ಶಿವು, ಭರತ್, ಸಂದೀಪ್, ಪ್ರಮೋದ್, ಆಕಾಶ್, ರವಿ, ಹೇಮಂತ್, ಸಂಜಯ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts