ನವದೆಹಲಿ: ದೆಹಲಿಯೂ ಸೇರಿ ಐದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಐವತ್ತು ತಂಡಗಳನ್ನು ನಿಯೋಜಿಸಿದ್ದು, ಪರಿಸರದ ಮೇಲೆ ತೀವ್ರ ನಿಗಾ ಇಡುವಂತೆ ಅವುಗಳಿಗೆ ಸೂಚಿಸಿದೆ. ಅಷ್ಟಕ್ಕೂ ಆ ತಂಡಗಳು ಯಾವ್ಯಾವು, ಯಾವ್ಯಾವ ರಾಜ್ಯಗಳಿಗೆ ಅವುಗಳನ್ನು ನಿಯೋಜಿಸಲಾಗಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.
ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಅವರು ದೆಹಲಿ, ಉತ್ತರಪ್ರದೇಶ, ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ಸಚಿವರು ಹಾಗೂ ಇಲಾಖಾ ಮುಖ್ಯಸ್ಥರ ಜತೆ ಸಭೆ ನಡೆಸಿದ ಬಳಿಕ ಈ ವಿಷಯವನ್ನು ಘೋಷಿಸಿದ್ದಾರೆ.
ಕೂಳೆ ಸುಡುವುದರ ಮೇಲೆ ನಿಗಾ ಇರಿಸಲು ಹಾಗೂ ಪರಿಸರ ಮಾಲಿನ್ಯಕ್ಕೆ ತಡೆವೊಡ್ಡಲು ಕೇಂದ್ರ ಮಾಲಿನ್ಯ ನಿಯಂತ್ರಣಾ ಮಂಡಳಿ (ಸಿಪಿಸಿಬಿ)ಯ 50 ತಂಡಗಳನ್ನು ನಿಯೋಜಿಸಲಾಗಿದ್ದು, ಈ ಐದು ರಾಜ್ಯಗಳಲ್ಲಿ ಅವು ತೀವ್ರ ನಿಗಾ ಇಡಲಿವೆ. ನವೆಂಬರ್ ಸಮಯಕ್ಕೆ ಪರಿಸರ ಮಾಲಿನ್ಯ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. (ಏಜೆನ್ಸೀಸ್)