More

    ಸ್ಥಳೀಯ ಬೆಳೆಗಾರರ ನಿರ್ಲಕ್ಷಿಸಿ ಅಡಕೆ ಆಮದು: ನೆಲ್ಯಾಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿ ಟೀಕೆ

    ವಿಜಯವಾಣಿ ಸುದ್ದಿಜಾಲ ನೆಲ್ಯಾಡಿ
    ದೇಶೀಯ ಅಡಕೆ ಬೆಳೆ ಬಿಟ್ಟು, ಹೊರದೇಶದಿಂದ ಅಡಕೆ ಆಮದು ಮಾಡಿಕೊಂಡಿರುವ ಕೇಂದ್ರ ಸರ್ಕಾರ, ಸ್ಥಳೀಯ ಬೆಳೆಗಾರರನ್ನು ನಿರ್ಲಕ್ಷಿಸಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿ ಟೀಕಿಸಿದರು.

    ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೆಲ್ಯಾಡಿಯಲ್ಲಿ ನಡೆದ ಬಹಿರಂಗ ಚುನಾವಣಾ ಸಭೆಯಲ್ಲಿ ಮಾತನಾಡಿದರು.

    ಅಡಕೆ ಸಮಸ್ಯೆ, ಹೆದ್ದಾರಿ ಕಾಮಗಾರಿ ಸೇರಿದಂತೆ ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ನೀಡಬೇಕಿದೆ. ಸಂಸತ್ ಸದಸ್ಯನಾಗಿ ಆಯ್ಕೆಯಾದ ಮೇಲೆ ತಿಂಗಳಿಗೊಂದು ದಿನ, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿ, ಎಲ್ಲರ ಸಹಕಾರ ಪಡೆದು ಅಭಿವೃದ್ಧಿ ಕಾರ್ಯ ಮಾಡುತ್ತೇನೆ ಎಂದರು.

    ದೇಶ ಸದೃಢ ಆಗಬೇಕೆನ್ನುವ ವಿರೋಧ ಪಕ್ಷದವರು ಹಲವು ಮನೆಗಳನ್ನು ಅನಾಥವಾಗಿಸಿದ್ದಾರೆ. ಹೀಗಾದರೆ ದೇಶ ಸದೃಢವಾಗುವುದು ಹೇಗೆ ಎಂದು ಪ್ರಶ್ನಿಸಿದ ಅವರು, ಇದು ಪದ್ಮರಾಜ್‌ಗೆ ಸಿಕ್ಕ ಅವಕಾಶ ಅಲ್ಲ. ಹಿಂದುಳಿದ ವರ್ಗದ ಪ್ರತಿಯೋರ್ವ ವ್ಯಕ್ತಿಗೂ ಸಿಕ್ಕಿರುವ ಅವಕಾಶ. ಹಿಂದುಳಿದ ವರ್ಗದ ಅಭ್ಯುದಯಕ್ಕಾಗಿ ಕೆಲಸ ಮಾಡುತ್ತೇನೆ ಎಂದರು.

    ಸ್ಥಳೀಯ ಬೆಳೆಗಾರರ ನಿರ್ಲಕ್ಷಿಸಿ ಅಡಕೆ ಆಮದು: ನೆಲ್ಯಾಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿ ಟೀಕೆ

    ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ವೆಂಕಪ್ಪ ಗೌಡ ಮಾತನಾಡಿದರು. ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಜಯಪ್ರಕಾಶ್, ಕಿರಣ್ ಬುಡ್ಲೆಗುತ್ತು, ಕೃಷ್ಣಪ್ಪ, ಉಷಾ ಅಂಚನ್, ವಿಜಯ್ ಕುಮಾರ್ ಸೊರಕೆ, ಪಿ.ಪಿ.ವರ್ಗೀಸ್, ಕೆ.ಪಿ. ಥಾಮಸ್, ಅಶೋಕ್, ಬೂತ್ ಹಾಗೂ ಗ್ರಾಮ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಶೆಟ್ಟಿ ಸ್ವಾಗತಿಸಿದರು. ಸರ್ವೋತ್ತಮ ಗೌಡ ವಂದಿಸಿದರು.

    ಗೋಳಿತ್ತೊಟ್ಟು ಕೋಲ್ಪೆ ಮಸೀದಿಗೆ ಭೇಟಿ

    ಗೋಳಿತ್ತೊಟ್ಟು ಕೋಲ್ಪೆ ಮಸೀದಿ, ನೆಲ್ಯಾಡಿ ಜ್ಞಾನೋದಯ ಬೆಥನಿ ಪಿಯು ಕಾಲೇಜಿಗೆ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿದರು.

    ಜಿಲ್ಲೆಯ ಸಮಗ್ರ ಅಭಿವೃದ್ಧಿ ಮಾಡಿರುವುದು ಕಾಂಗ್ರೆಸಿನ ಸಾಧನೆ. ಕಾಂಗ್ರೆಸ್ ಎಂಪಿಗಳು ಒಬ್ಬೊಬ್ಬರು ಒಂದೊಂದು ರೀತಿಯ ಕೊಡುಗೆ ನೀಡಿದ್ದಾರೆ. ನಂತರದ ಬಿಜೆಪಿ ಎಂಪಿಗಳ ಹೇಳಿಕೊಳ್ಳುವಂತಹ ಸಾಧನೆ ಏನೂ ಇಲ್ಲ. ಪದ್ಮರಾಜ್ ಗೆದ್ದರೆ ಅಭಿವೃದ್ಧಿ ಕೆಲಸಗಳು ಮತ್ತೆ ಆರಂಭಗೊಳ್ಳಲಿವೆ. ಬಡವರ ಪರ ಸದಾ ಆಲೋಚಿಸುವ ಪದ್ಮರಾಜ್ ಹೊಸ ಶಕೆಗೆ ಮುನ್ನುಡಿ ಬರೆಯಲಿದ್ದಾರೆ.
    -ರಮಾನಾಥ ರೈ ಮಾಜಿ ಸಚಿವ

    ನಾನೋರ್ವ ಹಿಂದು. ನನ್ನ ಧರ್ಮ ನನಗೆ ಹೇಳಿಕೊಟ್ಟಿರುವ ಆಚಾರ-ವಿಚಾರವನ್ನು ನನ್ನ ಜೀವನದಲ್ಲಿ ಪಾಲಿಸುತ್ತಿದ್ದೇನೆ. ಎಲ್ಲರನ್ನು ಪ್ರೀತಿಸಿ ಎಂದು ನನ್ನ ಧರ್ಮ ನನಗೆ ಹೇಳಿಕೊಟ್ಟಿದೆ. ಹಾಗಾಗಿ ಯಾರನ್ನೂ ದ್ವೇಷ ಮಾಡುವುದು ಬೇಡ. ಪ್ರೀತಿಯಿಂದ ಜನರನ್ನು ಗೆಲ್ಲಬೇಕು.
    -ಪದ್ಮರಾಜ್ ಆರ್.ಪೂಜಾರಿ, ಕಾಂಗ್ರೆಸ್ ಅಭ್ಯರ್ಥಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts