More

    ಕೇಂದ್ರ ಸಚಿವ ಸುರೇಶ್​ ಅಂಗಡಿ ನಿಧನ

    ಬೆಂಗಳೂರು: ಕೇಂದ್ರ ಸಚಿವ ಸುರೇಶ್​ ಅಂಗಡಿಯವರು ದೆಹಲಿಯ ಏಮ್ಸ್​ನಲ್ಲಿ ಬುಧವಾರ ರಾತ್ರಿ ನಿಧನರಾಗಿದ್ದಾರೆ.

    ಸುರೇಶ್​ ಅಂಗಡಿಯವರಿಗೆ 65 ವರ್ಷ ವಯಸ್ಸಾಗಿತ್ತು. 1955 ಜೂನ್ 1ರಂದು ಜನಿಸಿದ ಅಂಗಡಿಯವರು ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಆಯ್ಕೆಯಾಗಿ ಸಂಸದರಾಗಿದ್ದರು. ಪ್ರಸ್ತುತ ಕೇಂದ್ರ ರೈಲ್ವೆ ರಾಜ್ಯ ಖಾತೆಯ ಸಚಿವರಾಗಿದ್ದರು.

    ಅಂಗಡಿಯವರಿಗೆ ಸೆಪ್ಟೆಂಬರ್​ 11ರಂದು ಕರೊನಾ ದೃಢಪಟ್ಟಿತ್ತು. ಯಾವುದೇ ರೋಗ ಲಕ್ಷಣಗಳಿಲ್ಲದೇ ಕರೊನಾ ಪಾಸಿಟಿವ್​ ವರದಿಯಾಗಿತ್ತು. ಈ ಕುರಿತು ಸ್ವತಃ ಅವರೇ ಟ್ವೀಟ್​ ಮಾಡಿದ್ದರು. ಅಂದಿನಿಂದ ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇದೀಗ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

    ಅಂಗಡಿಯವರು ಬೆಳಗಾವಿ ಜಿಲ್ಲೆ ಮತ್ತು ತಾಲೂಕಿನ ಕೆ.ಕೆ. ಕೊಪ್ಪ ಮೂಲದವರು. ಚೆನ್ನಬಸಪ್ಪ ಮತ್ತು ಸೋಮವ್ವ ದಂಪತಿಯ ಮಗನಾಗಿ ಹುಟ್ಟಿದ ಅಂಗಡಿಯವರ ಪೂರ್ಣ ಹೆಸರು ಸುರೇಶ್​ ಚನ್ನಬಸಪ್ಪ ಅಂಗಡಿ. ಇವರು ಇಬ್ಬರು ಪುತ್ರಿ ಮತ್ತು ಪತ್ನಿಯನ್ನು ಅಗಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts