ನವದೆಹಲಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿದ ಬೆನ್ನಲ್ಲೇ, ಶಿಕ್ಷಣ ಕ್ಷೇತ್ರದಲ್ಲಿ ಮತ್ತೊಂದು ಕ್ರಾಂತಿಕಾರಕ ಬದಲಾವಣೆಗೆ ಪ್ರಧಾನಿ ನರೇಂದ್ರ ಮೋದಿ ಸಜ್ಜಾಗಿದ್ದಾರೆ. ಈ ನಿಟ್ಟಿನಲ್ಲಿ ಇದಕ್ಕಾಗಿ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) ಹಾಗೂ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಸಲಹೆ ಬಯಸಿದ್ದಾರೆ.
ಇಡೀ ಶಿಕ್ಷಣ ವ್ಯವಸ್ಥೆಯನ್ನೇ ಆನ್ಲೈನ್ ಶಿಕ್ಷಣ ವ್ಯವಸ್ಥೆಯಾಗಿ ರೂಪಿಸುವ ಮಹತ್ತರ ಉದ್ದೇಶ ಹೊಂದಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳು ತರಗತಿಗೆ ಹಾಜರಾಗುವ ಅಗತ್ಯವೇ ಇರುವುದಿಲ್ಲ. ಜತೆಗೆ, ಶಿಕ್ಷಣ ಸಂಸ್ಥೆಗಳ ಮೇಲಿನ ಆರ್ಥಿಕ ಹೊರೆಯನ್ನು ಇದು ಕಡಿಮೆ ಮಾಡಲಿದೆ.
ಇದನ್ನೂ ಓದಿ; ಶ್ರೀಲಂಕಾದಲ್ಲಿ ಪೂರ್ಣಪ್ರಮಾಣದಲ್ಲಿ ಶುರುವಾಗಿವೆ ಶಾಲೆಗಳು; ನಿಯಮಗಳು ಹೀಗಿವೆ….
ಇದಷ್ಟೇ ಅಲ್ಲ, ಉನ್ನತ ಶಿಕ್ಷಣ ಸಂಸ್ಥೆಗಳಾದ ಐಐಟಿ ಹಾಗೂ ಐಐಎಂಗಳನ್ನು ಕೂಡ ಈ ಆನ್ಲೈನ್ ಶಿಕ್ಷಣ ವ್ಯವಸ್ಥೆಯ ಭಾಗವನ್ನಾಗಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಪ್ರಧಾನ ಮಂತ್ರಿ ಕಚೇರಿ ಹಾಗೂ ಹಾಗೂ ನೀತಿ ಆಯೋಗವು ಯುಜಿಸಿ ಹಾಗೂ ಎಐಸಿಟಿಇಗೆ ಸಲಹೆ ಹಾಗೂ ಪ್ರತಿಕ್ರಿಯೆ ನೀಡುವಂತೆ ತಿಳಿಸಿದೆ.
ಈ ನಿಟ್ಟಿನಲ್ಲಿ ನೀಲಿನಕ್ಷೆ ತಯಾರಿಸಲು ಎಐಸಿಟಿಇ ಅಧ್ಯಕ್ಷ ಅನಿಲ್ ಸಹಸ್ರಬುದ್ಧೆ ಹಾಗೂ ಯುಜಿಸಿ ಉಪಾಧ್ಯಕ್ಷ ಡಾ. ಎಂ.ಪಿ. ಪೂನಿಯಾ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಭಾರತೀಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆನ್ಲೈನ್ ಶಿಕ್ಷಣ ಒದಗಿಸುವ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವ ಡಿಜಿಟಲ್ ವೇದಿಕೆಯನ್ನು ರೂಪಿಸುವ ಹೊಣೆ ನೀಡಲಾಗಿದೆ.
ಇದನ್ನೂ ಓದಿ; ಕಡತಗಳಿಗೆ ಸಹಿ ಹಾಕಲೆಂದೆ ಐಎಎಸ್ ಅಧಿಕಾರಿಯಾದೆ; ಅಪ್ಪನ ಕನಸು ನನಸಾದ ಸಾರ್ಥಕತೆ
ಎಲ್ಲ ವಿವಿಗಳ ಕುಲಪತಿಗಳು, ಶಿಕ್ಷಣ ಸಂಸ್ಥೆಗಳ ನಿರ್ದೇಶಕರಿಗೆ ಅನಿಲ್ ಸಹಸ್ರಬುದ್ಧೆ ಇತ್ತೀಚೆಗೆ ಪತ್ರವೊಂದನ್ನು ಬರೆದಿದ್ದರು. ಸ್ವಾವಲಂಬಿ ಭಾರತಕ್ಕಾಗಿ ಶ್ರಮಿಸುವಂತೆ ಕರೆ ನೀಡಿದ್ದರು. ಶಿಕ್ಷಕರು, ವಿದ್ಯಾರ್ಥಿಗಳಿಗೆ ಪರ್ಯಾಯ ಆ್ಯಪ್, ಇತರ ಉತ್ಪನ್ನಗಳು ಹಾಗೂ ತಾಂತ್ರಿಕತೆಯನ್ನು ಅಭಿವೃದ್ಧಿಪಡಿಸಲು ಪ್ರೋತ್ಸಾಹಿಸಿ ಎಮದು ಸಲಹೆ ನೀಡಿದ್ದರು.
ಸೆ.1ರಿಂದ ಶಾಲಾ- ಕಾಲೇಜು ಆರಂಭ ಪ್ರಕ್ರಿಯೆ; ಅರ್ಧದಷ್ಟು ಮಕ್ಕಳು, ಶಿಕ್ಷಕರಿಗಷ್ಟೇ ಅವಕಾಶ; ಹೀಗಿರಲಿದೆ ಮಾರ್ಗಸೂಚಿ?