More

    ಈರುಳ್ಳಿ ಬಫರ್ ಸ್ಟಾಕ್ ತಗೊಳ್ಳಿ, ದಾಸ್ತಾನಿಗೂ ಮಿತಿ ಇರಲಿ ಎಂದ ಕೇಂದ್ರ ಸರ್ಕಾರ

    ನವದೆಹಲಿ : ಈರುಳ್ಳಿ ಬೆಲೆ ಏರಿಕೆ ತೀವ್ರಗತಿಯಲ್ಲಿ ಸಾಗಿದ್ದು, ಇದನ್ನು ನಿಯಂತ್ರಿಸುವುದಕ್ಕೆ ಬಫರ್ ಸ್ಟಾಕ್​ ತಗೊಂಡು ಮಾರುಕಟ್ಟೆಗೆ ಪೂರೈಕೆ ಮಾಡಿ ಎಂದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸಲಹೆ ನೀಡಿದೆ. ಇದೇ ವೇಳೆ, ಈರುಳ್ಳಿ ಬೆಲೆ ಏರಿಕೆ ನಿಯಂತ್ರಣಕ್ಕಾಗಿ ಡಿಸೆಂಬರ್ 31ರವರೆಗೆ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರ ದಾಸ್ತಾನಿನ ಮೇಲೆ ಮಿತಿ ವಿಧಿಸಿದೆ.

    ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ಲೀನಾ ನಂದನ್, ಚಿಲ್ಲರೆ ವ್ಯಾಪಾರಿಗಳಿಗೆ ಗರಿಷ್ಠ 2 ಟನ್ ಹಾಗೂ ಸಗಟು ವ್ಯಾಪಾರಿಗಳಿಗೆ ಗರಿಷ್ಠ 25 ಟನ್​ಗಳವರೆಗೆ ಈರುಳ್ಳಿ ಸಂಗ್ರಹಕ್ಕೆ ಅವಕಾಶ ನೀಡಲಾಗಿದೆ. ಅಸ್ಸಾಂ, ಆಂಧ್ರಪ್ರದೇಶ, ಬಿಹಾರ, ಚಂಡೀಗಢ, ಹರಿಯಾಣ, ತೆಲಂಗಾಣ ಮತ್ತು ತಮಿಳುನಾಡು ರಾಜ್ಯಗಳು ಕೇಂದ್ರದಿಂದ ಈರುಳ್ಳಿ ಪಡೆಯಲು ಆಸಕ್ತಿ ತೋರಿಸಿದ್ದು, ಈವರೆಗೆ ಒಟ್ಟು 8,000 ಟನ್ ಈರುಳ್ಳಿ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

    ಇದನ್ನೂ ಓದಿ:  ರಾಜ್ಯ ರಾಜಧಾನಿಯಲ್ಲಿ ಟ್ರಾಫಿಕ್ ಸಿಗ್ನಲ್ ಸಿಸ್ಟಮ್ ಕೂಡ ಕಳುವಾಗಿದೆಯಂತೆ ನೋಡಿ!

    ಮಹಾರಾಷ್ಟ್ರದ ನಾಸಿಕ್​ನಲ್ಲಿರುವ ಬಫರ್ ಸ್ಟಾಕ್​ನಿಂದ ಪ್ರತಿಗೆ ಕೆ.ಜಿ 26 ರಿಂದ 28 ರೂ.ನಂತೆ ರಾಜ್ಯಗಳು ಈರುಳ್ಳಿಯನ್ನು ಖರೀದಿಸಬಹುದು. ಶೀಘ್ರದಲ್ಲೇ ಮುಂಗಾರು ಈರುಳ್ಳಿ ಮಾರುಕಟ್ಟೆಗೆ ಬರಲಿದೆ. ಇದರಿಂದ ಪೂರೈಕೆ ಹೆಚ್ಚಾಗಿ ಬೆಲೆ ಇಳಿಕೆ ಕಾಣಲಿದೆ ಎಂದು ಅವರು ತಿಳಿಸಿದ್ದಾರೆ. (ಏಜೆನ್ಸೀಸ್)

    ಫೆಬ್ರವರಿ ತನಕವೂ ಬೂದುಪಟ್ಟಿಯಲ್ಲೇ ಉಳಿಯಲಿದೆ ಪಾಕ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts