ನವದೆಹಲಿ: ಕೇಂದ್ರ ಸರ್ಕಾರ, ಅಸ್ಸಾಂ ಸರ್ಕಾರ ಮತ್ತು ಯುನೈಟೆಡ್ ಲಿಬರೇಷನ್ ಫ್ರಂಟ್ ಆಫ್ ಅಸ್ಸಾ (ಉಲ್ಫಾ) ನಡುವಿನ ತ್ರಿಪಕ್ಷೀಯ ಶಾಂತಿ ಒಪ್ಪಂದಕ್ಕೆ ದೆಹಲಿಯಲ್ಲಿ ಸಹಿ ಹಾಕಲಾಗಿದೆ.
ಈಶಾನ್ಯ ರಾಜ್ಯದಲ್ಲಿ ಶಾಂತಿ ನೆಲೆಸಲು ಈ ನಡೆಯು ಸಹಕರಿಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಆದರೆ, ಪರೇಶ್ ಬರುವಾ ನೇತೃತ್ವದ ಉಲ್ಫಾ (ಸ್ವತಂತ್ರ) ಬಣ ಮಾತುಕತೆಗೆ ವಿರೋಧ ವ್ಯಕ್ತಪಡಿಸಿದೆ.
ಅಸ್ಸಾಂನ ಅತ್ಯಂತ ಹಳೆಯ ದಂಗೆಕೋರ ಗುಂಪಿನೊಂದಿಗಿನ ಶಾಂತಿ ಒಪ್ಪಂದವು ಅಕ್ರಮ ವಲಸೆ, ಸ್ಥಳೀಯ ಸಮುದಾಯಗಳಿಗೆ ಭೂಮಿಯ ಹಕ್ಕುಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವ ಗುರಿ ಹೊಂದಿದೆ. ಅಲ್ಲದೆ, ಅಸ್ಸಾಂನ ಅಭಿವೃದ್ಧಿಗೆ ಹಣಕಾಸಿನ ಪ್ಯಾಕೇಜ್ ನೀಡುವ ಉದ್ದೇಶ ಹೊಂದಿದೆ.
ಈ ಕುರಿತು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಅಮಿತ್ ಶಾ, ಉಲ್ಫಾದ ಎಲ್ಲ ಸಮಂಜಸ ಬೇಡಿಕೆಗಳನ್ನು ಕಾಲಮಿತಿಯಲ್ಲಿ ಈಡೇರಿಸುವುದನ್ನು ಕೇಂದ್ರವು ಖಚಿತಪಡಿಸುತ್ತದೆ. ಅಲ್ಲದೆ, ಒಂದು ಸಂಘಟನೆಯಾಗಿ ಉಲ್ಫಾವನ್ನು ವಿಸರ್ಜಿಸಲಾಗುವುದು ಎಂದಿದ್ದಾರೆ.
“ಶಾಂತಿ ಪ್ರಕ್ರಿಯೆಯ ಯಶಸ್ಸನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರದಲ್ಲಿ ಅವರು ಇಟ್ಟಿರುವ ನಂಬಿಕೆಯನ್ನು ಗೌರವಿಸಲಾಗುವುದು ಎಂದು ಉಲ್ಫಾ ನಾಯಕತ್ವಕ್ಕೆ ನಾವು ಭರವಸೆ ನೀಡಲು ಬಯಸುತ್ತೇವೆ” ಎಂದು ಶ್ರೀ ಶಾ ಹೇಳಿದ್ದಾರೆ. ಅಲ್ಲದೆ, ಈಶಾನ್ಯದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ತಂದ ಕೀರ್ತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ ಎಂದಿದ್ದಾರೆ.
ಅಸ್ಸಾಂ ಮತ್ತು ಇತರ ಈಶಾನ್ಯ ರಾಜ್ಯಗಳ ಹಲವು ಪ್ರದೇಶಗಳಿಂದ ಸಶಸ್ತ್ರ ಪಡೆಗಳ (ವಿಶೇಷ) ಅಧಿಕಾರಗಳ ಕಾಯ್ದೆಯನ್ನು (ಎಎಫ್ಎಸ್ಪಿಎ) ತೆಗೆದುಹಾಕಿರುವುದು ಈ ಪ್ರದೇಶದಲ್ಲಿ ಬಂಡಾಯವು ಬಹುತೇಕ ನಿರ್ನಾಮವಾಗಿದೆ ಎಂಬುದಕ್ಕೆ ಪುರಾವೆಯಾಗಿದೆ ಶಾ ಹೇಳಿದರು.
ಶಾ ಜತೆಗಿದ್ದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು, ಉಲ್ಫಾ ಜತೆಗಿನ ಶಾಂತಿ ಒಪ್ಪಂದವು ಈ ಪ್ರದೇಶದಲ್ಲಿನ ದಂಗೆಯ ಸಮಸ್ಯೆಯನ್ನು ದೊಡ್ಡ ಪ್ರಮಾಣದಲ್ಲಿ ಪರಿಹರಿಸುತ್ತದೆ ಎಂದು ಹೇಳಿದರು.
2023ನೇ ಸಾಲಿನಲ್ಲಿ ಹೂಡಿಕೆದಾರರಿಗೆ ಹಣದ ಸುರಿಮಳೆ: ಒಂದು ವರ್ಷದಲ್ಲಿ 81.6 ಲಕ್ಷ ಕೋಟಿ ರೂಪಾಯಿ ಲಾಭ
ನವದೆಹಲಿ: ಕೇಂದ್ರ ಸರ್ಕಾರ, ಅಸ್ಸಾಂ ಸರ್ಕಾರ ಮತ್ತು ಯುನೈಟೆಡ್ ಲಿಬರೇಷನ್ ಫ್ರಂಟ್ ಆಫ್ ಅಸ್ಸಾ (ಉಲ್ಫಾ) ನಡುವಿನ ತ್ರಿಪಕ್ಷೀಯ ಶಾಂತಿ ಒಪ್ಪಂದಕ್ಕೆ ದೆಹಲಿಯಲ್ಲಿ ಸಹಿ ಹಾಕಲಾಗಿದೆ.
ಈಶಾನ್ಯ ರಾಜ್ಯದಲ್ಲಿ ಶಾಂತಿ ನೆಲೆಸಲು ಈ ನಡೆಯು ಸಹಕರಿಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಆದರೆ, ಪರೇಶ್ ಬರುವಾ ನೇತೃತ್ವದ ಉಲ್ಫಾ (ಸ್ವತಂತ್ರ) ಬಣ ಮಾತುಕತೆಗೆ ವಿರೋಧ ವ್ಯಕ್ತಪಡಿಸಿದೆ.
ಅಸ್ಸಾಂನ ಅತ್ಯಂತ ಹಳೆಯ ದಂಗೆಕೋರ ಗುಂಪಿನೊಂದಿಗಿನ ಶಾಂತಿ ಒಪ್ಪಂದವು ಅಕ್ರಮ ವಲಸೆ, ಸ್ಥಳೀಯ ಸಮುದಾಯಗಳಿಗೆ ಭೂಮಿಯ ಹಕ್ಕುಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವ ಗುರಿ ಹೊಂದಿದೆ. ಅಲ್ಲದೆ, ಅಸ್ಸಾಂನ ಅಭಿವೃದ್ಧಿಗೆ ಹಣಕಾಸಿನ ಪ್ಯಾಕೇಜ್ ನೀಡುವ ಉದ್ದೇಶ ಹೊಂದಿದೆ.
ಈ ಕುರಿತು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಅಮಿತ್ ಶಾ, ಉಲ್ಫಾದ ಎಲ್ಲ ಸಮಂಜಸ ಬೇಡಿಕೆಗಳನ್ನು ಕಾಲಮಿತಿಯಲ್ಲಿ ಈಡೇರಿಸುವುದನ್ನು ಕೇಂದ್ರವು ಖಚಿತಪಡಿಸುತ್ತದೆ. ಅಲ್ಲದೆ, ಒಂದು ಸಂಘಟನೆಯಾಗಿ ಉಲ್ಫಾವನ್ನು ವಿಸರ್ಜಿಸಲಾಗುವುದು ಎಂದಿದ್ದಾರೆ.
“ಶಾಂತಿ ಪ್ರಕ್ರಿಯೆಯ ಯಶಸ್ಸನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರದಲ್ಲಿ ಅವರು ಇಟ್ಟಿರುವ ನಂಬಿಕೆಯನ್ನು ಗೌರವಿಸಲಾಗುವುದು ಎಂದು ಉಲ್ಫಾ ನಾಯಕತ್ವಕ್ಕೆ ನಾವು ಭರವಸೆ ನೀಡಲು ಬಯಸುತ್ತೇವೆ” ಎಂದು ಶ್ರೀ ಶಾ ಹೇಳಿದ್ದಾರೆ. ಅಲ್ಲದೆ, ಈಶಾನ್ಯದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ತಂದ ಕೀರ್ತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ ಎಂದಿದ್ದಾರೆ.
ಅಸ್ಸಾಂ ಮತ್ತು ಇತರ ಈಶಾನ್ಯ ರಾಜ್ಯಗಳ ಹಲವು ಪ್ರದೇಶಗಳಿಂದ ಸಶಸ್ತ್ರ ಪಡೆಗಳ (ವಿಶೇಷ) ಅಧಿಕಾರಗಳ ಕಾಯ್ದೆಯನ್ನು (ಎಎಫ್ಎಸ್ಪಿಎ) ತೆಗೆದುಹಾಕಿರುವುದು ಈ ಪ್ರದೇಶದಲ್ಲಿ ಬಂಡಾಯವು ಬಹುತೇಕ ನಿರ್ನಾಮವಾಗಿದೆ ಎಂಬುದಕ್ಕೆ ಪುರಾವೆಯಾಗಿದೆ ಶಾ ಹೇಳಿದರು.
ಶಾ ಜತೆಗಿದ್ದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು, ಉಲ್ಫಾ ಜತೆಗಿನ ಶಾಂತಿ ಒಪ್ಪಂದವು ಈ ಪ್ರದೇಶದಲ್ಲಿನ ದಂಗೆಯ ಸಮಸ್ಯೆಯನ್ನು ದೊಡ್ಡ ಪ್ರಮಾಣದಲ್ಲಿ ಪರಿಹರಿಸುತ್ತದೆ ಎಂದು ಹೇಳಿದರು.
2023ನೇ ಸಾಲಿನಲ್ಲಿ ಹೂಡಿಕೆದಾರರಿಗೆ ಹಣದ ಸುರಿಮಳೆ: ಒಂದು ವರ್ಷದಲ್ಲಿ 81.6 ಲಕ್ಷ ಕೋಟಿ ರೂಪಾಯಿ ಲಾಭ
ರೂ. 2 ಲಕ್ಷ ಹೂಡಿದ್ದರೆ ಒಂದೇ ವರ್ಷದಲ್ಲಿ ಕೋಟ್ಯಧಿಪತಿ: ಈ ಬಂಪರ್ ಷೇರು ಯಾವುದು ಗೊತ್ತೆ?
ನವದೆಹಲಿ: ಕೇಂದ್ರ ಸರ್ಕಾರ, ಅಸ್ಸಾಂ ಸರ್ಕಾರ ಮತ್ತು ಯುನೈಟೆಡ್ ಲಿಬರೇಷನ್ ಫ್ರಂಟ್ ಆಫ್ ಅಸ್ಸಾ (ಉಲ್ಫಾ) ನಡುವಿನ ತ್ರಿಪಕ್ಷೀಯ ಶಾಂತಿ ಒಪ್ಪಂದಕ್ಕೆ ದೆಹಲಿಯಲ್ಲಿ ಸಹಿ ಹಾಕಲಾಗಿದೆ.
ಈಶಾನ್ಯ ರಾಜ್ಯದಲ್ಲಿ ಶಾಂತಿ ನೆಲೆಸಲು ಈ ನಡೆಯು ಸಹಕರಿಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಆದರೆ, ಪರೇಶ್ ಬರುವಾ ನೇತೃತ್ವದ ಉಲ್ಫಾ (ಸ್ವತಂತ್ರ) ಬಣ ಮಾತುಕತೆಗೆ ವಿರೋಧ ವ್ಯಕ್ತಪಡಿಸಿದೆ.
ಅಸ್ಸಾಂನ ಅತ್ಯಂತ ಹಳೆಯ ದಂಗೆಕೋರ ಗುಂಪಿನೊಂದಿಗಿನ ಶಾಂತಿ ಒಪ್ಪಂದವು ಅಕ್ರಮ ವಲಸೆ, ಸ್ಥಳೀಯ ಸಮುದಾಯಗಳಿಗೆ ಭೂಮಿಯ ಹಕ್ಕುಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವ ಗುರಿ ಹೊಂದಿದೆ. ಅಲ್ಲದೆ, ಅಸ್ಸಾಂನ ಅಭಿವೃದ್ಧಿಗೆ ಹಣಕಾಸಿನ ಪ್ಯಾಕೇಜ್ ನೀಡುವ ಉದ್ದೇಶ ಹೊಂದಿದೆ.
ಈ ಕುರಿತು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಅಮಿತ್ ಶಾ, ಉಲ್ಫಾದ ಎಲ್ಲ ಸಮಂಜಸ ಬೇಡಿಕೆಗಳನ್ನು ಕಾಲಮಿತಿಯಲ್ಲಿ ಈಡೇರಿಸುವುದನ್ನು ಕೇಂದ್ರವು ಖಚಿತಪಡಿಸುತ್ತದೆ. ಅಲ್ಲದೆ, ಒಂದು ಸಂಘಟನೆಯಾಗಿ ಉಲ್ಫಾವನ್ನು ವಿಸರ್ಜಿಸಲಾಗುವುದು ಎಂದಿದ್ದಾರೆ.
“ಶಾಂತಿ ಪ್ರಕ್ರಿಯೆಯ ಯಶಸ್ಸನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರದಲ್ಲಿ ಅವರು ಇಟ್ಟಿರುವ ನಂಬಿಕೆಯನ್ನು ಗೌರವಿಸಲಾಗುವುದು ಎಂದು ಉಲ್ಫಾ ನಾಯಕತ್ವಕ್ಕೆ ನಾವು ಭರವಸೆ ನೀಡಲು ಬಯಸುತ್ತೇವೆ” ಎಂದು ಶ್ರೀ ಶಾ ಹೇಳಿದ್ದಾರೆ. ಅಲ್ಲದೆ, ಈಶಾನ್ಯದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ತಂದ ಕೀರ್ತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ ಎಂದಿದ್ದಾರೆ.
ಅಸ್ಸಾಂ ಮತ್ತು ಇತರ ಈಶಾನ್ಯ ರಾಜ್ಯಗಳ ಹಲವು ಪ್ರದೇಶಗಳಿಂದ ಸಶಸ್ತ್ರ ಪಡೆಗಳ (ವಿಶೇಷ) ಅಧಿಕಾರಗಳ ಕಾಯ್ದೆಯನ್ನು (ಎಎಫ್ಎಸ್ಪಿಎ) ತೆಗೆದುಹಾಕಿರುವುದು ಈ ಪ್ರದೇಶದಲ್ಲಿ ಬಂಡಾಯವು ಬಹುತೇಕ ನಿರ್ನಾಮವಾಗಿದೆ ಎಂಬುದಕ್ಕೆ ಪುರಾವೆಯಾಗಿದೆ ಶಾ ಹೇಳಿದರು.
ಶಾ ಜತೆಗಿದ್ದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು, ಉಲ್ಫಾ ಜತೆಗಿನ ಶಾಂತಿ ಒಪ್ಪಂದವು ಈ ಪ್ರದೇಶದಲ್ಲಿನ ದಂಗೆಯ ಸಮಸ್ಯೆಯನ್ನು ದೊಡ್ಡ ಪ್ರಮಾಣದಲ್ಲಿ ಪರಿಹರಿಸುತ್ತದೆ ಎಂದು ಹೇಳಿದರು.
2023ನೇ ಸಾಲಿನಲ್ಲಿ ಹೂಡಿಕೆದಾರರಿಗೆ ಹಣದ ಸುರಿಮಳೆ: ಒಂದು ವರ್ಷದಲ್ಲಿ 81.6 ಲಕ್ಷ ಕೋಟಿ ರೂಪಾಯಿ ಲಾಭ
ರೂ. 2 ಲಕ್ಷ ಹೂಡಿದ್ದರೆ ಒಂದೇ ವರ್ಷದಲ್ಲಿ ಕೋಟ್ಯಧಿಪತಿ: ಈ ಬಂಪರ್ ಷೇರು ಯಾವುದು ಗೊತ್ತೆ?
ಬಿಎಸ್ಇ, ನಿಫ್ಟಿ ಸೆನ್ಸೆಕ್ಸ್ ಅಲ್ಪ ಇಳಿಕೆ: 2003ರ ಕೊನೆಯ ವಹಿವಾಟಿನ ದಿನ ಸೂಚ್ಯಂಕ ಕುಸಿತ ಕಂಡಿದ್ದೇಕೆ?