More

    ಸರ ಕದ್ದು ಪರಾರಿ ಆಗುವಾಗಲೇ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ; ಬೈಕ್​ ಕಳವು ಪ್ರಕರಣದಲ್ಲೂ ತಗಲಾಕೊಂಡ..

    ಬೆಂಗಳೂರು: ಕಳ್ಳನೊಬ್ಬ ಸರಗಳವು ಮಾಡಿಕೊಂಡು ಪರಾರಿ ಆಗಬೇಕು ಎನ್ನುವಷ್ಟರಲ್ಲಿ ಸಾರ್ವಜನಿಕರ ಕೈಗೆ ಸಿಕ್ಕಿಹಾಕಿಕೊಂಡಿದ್ದು, ಅವರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮಾತ್ರವಲ್ಲ, ಒಂದು ಕಳ್ಳತನದಲ್ಲಿ ಸಿಕ್ಕಿಹಾಕಿಕೊಂಡ ಈತನ ಇತರ ಕಳವು ಪ್ರಕರಣಗಳೂ ಬೆಳಕಿಗೆ ಬಂದಿವೆ.

    ಚಾಮರಾಜಪೇಟೆ ಪ್ರದೇಶದಲ್ಲಿ ಕಳವು ಮಾಡಿದ್ದ ಈತ ಇನ್ನೇನು ತಪ್ಪಿಸಿಕೊಳ್ಳಬೇಕು ಎನ್ನುವಷ್ಟರಲ್ಲಿ ಸಿಕ್ಕಿಹಾಕಿಕೊಂಡಿದ್ದಾನೆ. ಸಾರ್ವಜನಿಕರಿಂದ ಈತನನ್ನು ವಶಕ್ಕೆ ಪಡೆದುಕೊಂಡ ಚಾಮರಾಜಪೇಟೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸಿದಾಗ ಒಂದು ವಿಜಯನಗರ, ಕಾಟನ್​ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ದ್ವಿಚಕ್ರವಾಹನ ಹಾಗೂ ಇನ್ನೆರಡು ಸರಗಳವು ಪ್ರಕರಣಗಳು ಬಯಲಾಗಿವೆ.

    ಇದನ್ನೂ ಓದಿ: 6 ಎಕರೆ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ವಸತಿ ಬಡಾವಣೆ ತೆರವು; ಜೆಸಿಬಿ ಮೂಲಕ ನಾಶಪಡಿಸಿದ ಅಧಿಕಾರಿಗಳು

    ಬಂಧಿತನಿಂದ 2 ಲಕ್ಷ ರೂಪಾಯಿ ಮೌಲ್ಯದ ಎರಡು ಚಿನ್ನದ ಸರ, ಎರಡು ದ್ವಿಚಕ್ರ ವಾಹನ, ಹಾಗೂ 220 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಈ ಕಳ್ಳ ನಂಬರ್ ಪ್ಲೇಟ್​ ಇರದ ಬೈಕ್​ನಲ್ಲಿ ಬಂದು ಸರ ಕಸಿದುಕೊಂಡು ಪರಾರಿ ಆಗುತ್ತಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಂಬರ್ ಪ್ಲೇಟ್ ಇಲ್ಲದ ಬೈಕ್ ನಲ್ಲಿ ಬಂದು ಸರ ಕಸಿದು ಪರಾರಿಯಾಗುತ್ತಿದ್ದ ಆರೋಪಿ. ಆರೋಪಿ ವಿರುದ್ಧ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಇವರಿಷ್ಟು ಮಂದಿಗೆ ಎರಡೂ ಡೋಸ್ ಲಸಿಕೆ ಪಡೆದಿದ್ದರೂ ಕರೊನಾ ಬಂತು!; ಈ ಪೈಕಿ ಕೇರಳದಲ್ಲೇ ಗರಿಷ್ಠ ಪ್ರಕರಣ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts