More

    ಬಿಜೆಪಿ ಗೆಲುವಿಗೆ ಶ್ರಮಿಸಲು ಸಲಹೆ

    ಚಳ್ಳಕೆರೆ: 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಕಾರ್ಯಕರ್ತರು ಈಗಿಂಗಲೇ ಪಕ್ಷ ಸಂಘಟನೆಯಲ್ಲಿ ತೊಡಗಬೇಕು ಎಂದು ಮಂಡಲ ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್ ಹೇಳಿದರು.

    ನಗರದ ಚೇಂಬರ್ ಆಫ್ ಕಾಮರ್ಸ್ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬಿಜೆಪಿ ಮಂಡಲ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಪಕ್ಷದ ಬಾವುಟ ಸ್ವೀಕರಿಸಿ ಮಾತನಾಡಿದರು.

    ಕ್ಷೇತ್ರದಲ್ಲಿ ಎರಡು ಅವಧಿಗೆ ಬಿಜೆಪಿ ಶಾಸಕರಿಲ್ಲ ಎಂಬ ಕೊರಗು ದೂರ ಮಾಡಬೇಕು. ಪ್ರತಿ ಘಟಕದ ಕಾರ್ಯಕರ್ತರು ಸಂಘಟಿತ ಕಾರ್ಯಕ್ರಮಗಳೊಂದಿಗೆ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಅವರ ಬದುಕಿನ ಸುಧಾರಣೆಗೆ ಕೇಂದ್ರ-ರಾಜ್ಯ ಸರ್ಕಾರ ಜಾರಿ ಮಾಡುತ್ತಿರುವ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಕೆಲವೇ ತಿಂಗಳಲ್ಲಿ ಎದುರಾಗುವ ಸ್ಥಳೀಯ ಪಂಚಾಯಿತಿ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ಸನ್ನದ್ಧರಾಗಬೇಕು ಎಂದು ತಿಳಿಸಿದರು.

    ಮಂಡಲ ಮಾಜಿ ಅಧ್ಯಕ್ಷ ಸೋಮಶೇಖರ್ ಮಂಡಿಮಠ್ ಮಾತನಾಡಿ, ಪಕ್ಷದ ಕೆಲ ಗೊಂದಲಗಳಿಂದ ಕಳೆದ ಎರಡು ಚುನಾವಣೆಗಳಲ್ಲಿ ಸೋಲು ಕಾಣಬೇಕಾಯಿತು. ಈಗ ಕಾರ್ಯಕರ್ತರಲ್ಲಿ ಜಾಗೃತಿ ಮೂಡಿದಂತಾಗಿದೆ. ಪ್ರತಿ ಘಟಕ ಪದಾಧಿಕಾರಿಗಳು ಒಗ್ಗೂಡುವ ಮೂಲಕ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು ಸಿದ್ಧರಾಗಬೇಕು ಎಂದರು.

    ಮಂಡಲ ಮಾಜಿ ಅಧ್ಯಕ್ಷ ಆದಿ ಭಾಸ್ಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯ ಎನ್.ಓಬಳೇಶ್, ತಾಪಂ ಸದಸ್ಯ ಸಣ್ಣಸೂರಯ್ಯ, ಜಿಲ್ಲಾ ಉಪಾಧ್ಯಕ್ಷ ಬಾಳೆಕಾಯಿ ರಾಮದಾಸ್, ಮಾಜಿ ಅಧ್ಯಕ್ಷ ಭೂಲಿಂಗಪ್ಪ, ಪ್ರಧಾನ ಕಾರ್ಯದರ್ಶಿ ಜಿ.ಪಿ.ಜಯಪಾಲಯ್ಯ, ವಕ್ತಾರ ದಿನೇಶ್‌ರೆಡ್ಡಿ, ಯುವಮೋರ್ಚಾ ಮಾಜಿ ಅಧ್ಯಕ್ಷ ಮಾತೃಶ್ರೀ ಮಂಜುನಾಥ, ಭರತೇಶ್ ರೆಡ್ಡಿ, ಕುಬೇರರೆಡ್ಡಿ, ಟಿ.ಜೆ.ತಿಪ್ಪೇಸ್ವಾಮಿ, ಎನ್. ನರಸಿಂಹಯ್ಯ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts