ಹೆಕ್ಟೇರ್‌ಗೆ 25 ಸಾವಿರ ರೂ. ಪರಿಹಾರಕ್ಕೆ ಪಟ್ಟು

blank

ಚಳ್ಳಕೆರೆ: ಮಳೆ ಕೊರತೆಯಿಂದ ಬೆಳೆನಷ್ಟ ಮಾಡಿಕೊಂಡಿರುವ ರೈತರಿಗೆ ಹೆಕ್ಟೇರ್‌ಗೆ 25 ಸಾವಿರ ರೂ. ಪರಿಹಾರ ಹಾಗೂ ವಿಮೆ ಬಿಡುಗಡೆ ಮಾಡುವಂತೆ ಆಗ್ರಹಿಸಿ ತಾಲೂಕು ಕಚೇರಿ ಎದುರು ರೈತಸಂಘದ ನೂರಾರು ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.

blank

ಜಿಲ್ಲಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರಡ್ಡಿ ಮಾತನಾಡಿ, ತಾಲೂಕಿನಲ್ಲಿ ಭೀಕರ ಬರಗಾಲದ ಪರಿಸ್ಥಿತಿ ಇದೆ. ಈಗಾಗಲೇ ರಾಜ್ಯ ಮತ್ತು ಕೇಂದ್ರ ಸರ್ಕಾರ ಬರ ಅಧ್ಯಯನ ಸಮೀಕ್ಷೆ ನಡೆಸಿವೆ, ಬರಪೀಡಿತ ಪ್ರದೇಶವೆಂದು ಘೋಷಿಸಿವೆ. ಬೆಳೆ ಪರಿಹಾರ ಮತ್ತು ವಿಮೆಗಾಗಿ ರೈತ ಸಂಘಟನೆಗಳ ಮೂಲಕ ಹಲವು ಬಾರಿ ಮನವಿ ಸಲ್ಲಿಸಲಾಗಿದೆ ಎಂದರು.

ಆದರೂ ಬೆಳೆ ಪರಿಹಾರ ಬಿಡುಗಡೆ ಮಾಡದೆ ರೈತ ವಿರೋಧಿಯಾಗಿ ಸರ್ಕಾರಗಳು ವರ್ತಿಸುತ್ತಿವೆ. ತಾಲೂಕು ಆಡಳಿತದಿಂದ ಹೊಲಗಳ ರಸ್ತೆ ಸಮಸ್ಯೆ ಸೇರಿ ಸರ್ವೇ ಸ್ಕೆಚ್, ನಕಾಶೆ ವಿತರಣೆಗೆ ಸ್ಪಂದನೆ ಸಿಗುತ್ತಿಲ್ಲ ಎಂದು ದೂರಿದರು.

ಕಚೇರಿ ಕೆಲಸಕ್ಕೆ ಅಧಿಕಾರಿಗಳು ಸಕಾಲಕ್ಕೆ ಸರಿಯಾಗಿ ಹಾಜರಾಗುತ್ತಿಲ್ಲ. ಮೇಲಾಧಿಕಾರಿಗಳು ನಿರ್ಲಕ್ಷ್ಯ ತೋರುವ ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು.

ರೈತರಿಂದ ಬೆಳೆವಿಮೆ ಕಟ್ಟಿಸಿಕೊಂಡಿರುವ ಸರ್ಕಾರ ಈ ಕೂಡಲೇ ವಿಮೆ ಹಣ ಬಿಡುಗಡೆ ಮಾಡಿಸಬೇಕು ಎಂದು ಆಗ್ರಹಿಸಿದರು.

ಬೇಸಿಗೆ ಪರಿಸ್ಥಿತಿಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆಗೆ ಹೆಚ್ಚಿನ ನಿಗಾ ವಹಿಸಬೇಕು. ಕೂಲಿ ಕಾರ್ಮಿಕರ ಕುಟುಂಬಗಳ ನಿರ್ವಹಣೆಗೆ ಖಾತ್ರಿ ಯೋಜನೆಯಡಿ ಬರಗಾಲ ಕಾಮಾಗಾರಿಗಳನ್ನು ಆರಂಭಿಸಬೇಕು ಎಂದು ಒತ್ತಾಯಿಸಿದರು.

ತಹಸೀಲ್ದಾರ್ ರೆಹಾನ್ ಪಾಷಾ ಅವರಿಗೆ ಮನವಿ ಸಲ್ಲಿಸಲಾಯಿತು. ಮುಖಂಡರಾದ ಕೊಟ್ರಬಸಪ್ಪ, ಚಂದ್ರಶೇಖರ ನಾಯಕ, ಮಲ್ಲಸಮುದ್ರ ಗಂಗಾಧರ, ಕೆ.ಮಲ್ಲೇಶಪ್ಪ, ಒ.ಟಿ.ತಿಪ್ಪೇಸ್ವಾಮಿ, ಮಂಜುನಾಥ, ರಾಮನಾಯಕ, ವೀರೇಶ, ಚಂದ್ರಣ್ಣ, ರಾಜಣ್ಣ, ಎಸ್.ಮಂಜುನಾಥ, ಪಿ.ಈರಣ್ಣ, ಪಾಪಯ್ಯ, ಬೊಮ್ಮಯ್ಯ ಇತರರಿದ್ದರು.

Share This Article

ವಾರದ ಯಾವ ದಿನ ಯಾವ ದೇವರನ್ನು ಪೂಜಿಸಬೇಕೆಂದು ನಿಮಗೆ ತಿಳಿದಿದೆಯೇ? Weekly Worship Guide

Weekly Worship Guide : ದೇವರ ಆರಾಧನೆಯು ಜೀವನದಲ್ಲಿ ವಿಶೇಷವಾಗಿ ಪ್ರಮುಖ ಸ್ಥಾನವನ್ನು ಹೊಂದಿದೆ. ಪ್ರತಿದಿನ…

ದೇಹದ ತೂಕ ಕಡಿಮೆ ಮಾಡಲು ಮಾವಿನ ಎಲೆ ಕಷಾಯ! Mango Leaves ಬಳಸುವುದು ಹೇಗೆ?

Mango Leaves :  ಇತ್ತೀಚಿನ ದಿನಗಳಲ್ಲಿ, ಅಧಿಕ ತೂಕವು ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಅಧಿಕ…

ಬೀದಿ ಬದಿ ಅಂಗಡಿಗಳಲ್ಲಿ ಹಣ್ಣಿನ ಜ್ಯೂಸ್​ ಕುಡಿಯುವಾಗ ಐಸ್​ ಸೇರಿಸುವುದನ್ನು ತಪ್ಪಿಸಿ… ಆಘಾತಕಾರಿ ವಿಡಿಯೋ ವೈರಲ್​! Street Juices

Street Juices : ಅನೇಕ ಮಂದಿ ವಿವಿಧ ರೀತಿಯ ಹಣ್ಣಿನ ಜ್ಯೂಸ್‌ಗಳನ್ನು ಇಷ್ಟಪಡುತ್ತಾರೆ. ಅದರಲ್ಲೂ ಬೇಸಿಗೆಯಲ್ಲಿ…