ಚಳ್ಳಕೆರೆ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಶಾಲಾ ಸಮಿತಿ ಅಧ್ಯಕ್ಷ ಕೆ.ಆರ್. ನರೇಂದ್ರಬಾಬು ಹೇಳಿದರು.
ತಾಲೂಕಿನ ಕೊರ್ಲಕುಂಟೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಎರಡನೇ ಹಂತದ ಸಮವಸ್ತ್ರ ವಿತರಿಸಿ ಮಾತನಾಡಿದರು.
ಪ್ರತಿ ಮಗುವಿಗೂ ಶಿಕ್ಷಣ ಸಿಗಬೇಕು.ಸಮವಸ್ತ್ರ, ಸೈಕಲ್, ಬಿಸಿಯೂಟ ಸೌಲಭ್ಯಗಳ ಬಗ್ಗೆ ಹೆಚ್ಚು ಜಾಗೃತಿ ಆಗಬೇಕು ಎಂದರು. ಶಾಲಾ ಸಮಿತಿ ಉಪಾಧ್ಯಕ್ಷೆ ನಾಗಮಣಿ, ಸದಸ್ಯರಾದ ಎನ್. ಈರಣ್ಣ, ವೈ. ತಿಪ್ಪೇಸ್ವಾಮಿ, ಈ. ವಿಠಲ, ಮುಖ್ಯಶಿಕ್ಷಕ ವಿಶ್ವನಾಥ್, ಸಹಶಿಕ್ಷಕರಾದ ಸದಾನಂದಪ್ಪ, ಪ್ರಕಾಶ್ ಇದ್ದರು.