ಚಾಮರಾಜನಗರ: ಹೊಸ ವರ್ಷಾಚರಣೆ ಬಂದೋಬಸ್ತ್ ಕರ್ತವ್ಯ ನಿರ್ವಹಿಸಿ ಮನೆಗೆ ಹಿಂತಿರುಗುವಾಗ ಪೊಲೀಸ್ ಪೇದೆಯೊಬ್ಬರು ಆಯ ತಪ್ಪಿ ಬೈಕ್ನಿಂದ ಬಿದ್ದು ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ಮುಖ್ಯರಸ್ತೆಯ ಹರಳೆ ಬಳಿ ನಡೆದಿದೆ.
ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಆರ್.ಎಸ್. ದೊಡ್ಡಿ ಗ್ರಾಮದ ಸಿದ್ದರಾಜು ಘಟನೆಯಲ್ಲಿ ಮೃತಪಟ್ಟವರು.
ಹೊಸ ವರ್ಷ ಸಂಭ್ರಮಾಚರಣೆಯ ಬಿಗಿ ಬಂದೋಬಸ್ತ್ಗಾಗಿ ನರೀಪುರ ಪಾಯಿಂಟ್ಗೆ ಪೇದೆ ಸಿದ್ದರಾಜು ಅವರನ್ನು ನಿಯೋಜಿಸಲಾಗಿತ್ತು. ರಾತ್ರಿ ಕರ್ತವ್ಯ ಮುಗಿಸಿ ಹಿಂತಿರುಗುವಾಗ ಬೈಕ್ ರಸ್ತೆ ಗುಂಡಿಗೆ ಬಿತ್ತು. ನಂತರ ಬೈಕ್ ನಿಯಂತ್ರಣ ತಪ್ಪಿ ಪಕ್ಕದಲ್ಲೇ ನಿರ್ಮಾಣಗೊಂಡಿದ್ದ ಕಾಲುವೆಗೆ ಬೈಕ್ ಉರುಳಿ ಬಿತ್ತು. ತಲೆಗೆ ತೀವ್ರ ಪೆಟ್ಟಾಗಿ ಮೃತಪಟ್ಟರು.
ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ.