More

    ಲೋಕಸಭೆ ಚುನಾವಣೆಯಲ್ಲಿ ಬಿಎಸ್ಪಿ ಏಕಾಂಗಿ ಸ್ಪರ್ಧೆ

    ಚಾಮರಾಜನಗರ: ದೇಶದಲ್ಲಿ ವಿವಿಧ ಪಕ್ಷಗಲೊಂದಿಗೆ ಹೊಂದಾಣಿಕೆ ಮಾಡಿಕೊಂಡಿರುವ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಗೆ ಬಿಎಸ್ಪಿ ತಲೆನೋವಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದ್ದೇವೆ ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಸಂಯೋಜಕ ಹಾಗೂ ಉಸ್ತುವಾರಿ ಎಂ.ಕೃಷ್ಣಮೂರ್ತಿ ತಿಳಿಸಿದರು.

    ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ಪರಿವರ್ತನ ಅಧ್ಯಯನ ಕೇಂದ್ರದಲ್ಲಿ ಬುಧವಾರ ಆಯೋಜಿಸಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

    ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲೇ ದೊಡ್ಡ ಪಕ್ಷಗಳು ಎಂದು ಕರೆಸಿಕೊಳ್ಳುವ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ತಲಾ 20 ಕ್ಕಿಂತಲೂ ಹೆಚ್ಚು ಪಕ್ಷಗಳ ತೆಗೆ ಹೊಂದಾಣಿಕೆ ಮಾಡಿಕೊಂಡು ಸ್ಪರ್ಧಿಸುತ್ತಿದೆ. ಆದರೆ ಮಾಯಾವತಿ ಅವರ ನೇತೃತ್ವದ ಬಿಎಸ್ಪಿ ಏಕಾಂಗಿ ಸ್ಫರ್ಧೆ ಮಾಡುತ್ತಿರುವುದು ಬಿಜೆಪಿ, ಕಾಂಗ್ರೆಸ್ ಮೈತ್ರಿಗೆ ದೊಡ್ಡ ತಲೆನೋವಾಗಿದೆ. ಸಂವಿಧಾನ ವಿರೋಧಿ ಧೋರಣೆಯನ್ನು ಅನುಸರಿಸುತ್ತಿರುವ ಪಕ್ಷಗಳನ್ನು ಈ ಬಾರಿ ಸೋಲಿಸಬೇಕಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಂಬಿಕೆ ಇರುವ ಬಿಎಸ್ಪಿಯನ್ನು ಬೆಂಬಲಿಸಬೇಕಿದೆ ಎಂದರು.

    ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಆನೆ ಗುರುತನ್ನು ಅಭ್ಯರ್ಥಿ ಎಂದು ಭಾವಿಸಿ, ಕಾರ್ಯಕರ್ತರು ಮತನೀಡಬೇಕು. ಈ ಮೂಲಕ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಮತ್ತು ಕೇಂದ್ರದ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವ ಪ್ರಯತ್ನ ಮಾಡೋಣ ಎಂದು ಕರೆ ನೀಡಿದರು.
    ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಹ.ರಾ.ಮಹೇಶ್ ಮಾತನಾಡಿ, ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಸಂವಿಧಾನವನ್ನು ನಾಶಮಾಡಲು ಮುಂದಾಗಿದ್ದಾರೆ. ಅವರದ್ದೇ ಸಂಸದರಿಂದ ಅದನ್ನು ಹೇಳಿಸುವ ಪ್ರಯತ್ನ ಮಾಡಿದೆ. ಈ ವಿಚಾರದಲ್ಲಿ ಬಿಜೆಪಿಗೆ ಕಾಂಗ್ರೆಸ್ ಪರೋಕ್ಷವಾಗಿ ಸಹಕಾರ ಮಾಡುತ್ತಾ ಬಂದಿದೆ. ಸಂವಿಧಾನ ಉಳಿವಿಗಾಗಿ ಈ ಬಾರಿಯ ಚುನಾವಣೆಯಲ್ಲಿ ಬಹುಜನರು ಬಿಎಸ್ಪಿಯನ್ನು ಬೆಂಬಲಿಸಬೇಕು ಎಂದು ಹೇಳಿದರು.

    ಸಭೆಯಲ್ಲಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮತ್ತು ನಿವೃತ್ತ ತಹಶೀಲ್ದಾರ್ ಸಿ.ಮಹದೇವಯ್ಯ ಚಾಮರಾಜುನಗರ ಜಿಲ್ಲಾಧ್ಯಕ್ಷ ಎನ್.ನಾಗಯ್ಯ, ಮೈಸೂರು ಜಿಲ್ಲಾಧ್ಯಕ್ಷ ಬಿ.ಆರ್.ಪುಟ್ಟಸ್ವಾಮಿ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರದ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts