More

    ಪ್ರಸಾದ್ ಮೌಲ್ಯಯುತ ರಾಜಕಾರಣಿ

    ಚಾಮರಾಜನಗರ: ಸಂಸದ ವಿ.ಶ್ರೀನಿವಾಸಪ್ರಸಾಸ್ ಅವರು ಮೌಲ್ಯಯುತ ರಾಜಕಾರಣಿಯಾಗಿದ್ದು, ಬಡವರು, ದಲಿತರು, ಶೋಷಿತರ ಧ್ವನಿಯಾಗಿದ್ದರು ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಹೇಳಿದರು.

    ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಗರ ಮಂಡಲ ವತಿಯಿಂದ ಸೋಮವಾರ ನಡೆದ ವಿ.ಶ್ರೀನಿವಾಸಪ್ರಸಾದ್ ಅವರಿಗೆ ಏರ್ಪಡಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು. ಶ್ರೀನಿವಾಸಪ್ರಸಾದ್ ಅವರು ಸಂಸದರಾಗಿ, ಶಾಸಕರಾಗಿ, ಸಚಿವರಾಗಿ ಜಿಲ್ಲೆ, ರಾಜ್ಯ, ದೇಶದಲ್ಲಿ ಸುದೀರ್ಘವಾಗಿ ಉತ್ತಮ ಸಾರ್ವಜನಿಕರ ಸೇವೆ ಸಲ್ಲಿಸಿದ್ದಾರೆ. ಸದಾ ಬಡವರು, ದಲಿತರು, ಶೋಷಿತರ ಪರ ಅಪಾರ ಕಾಳಜಿ ಹೊಂದಿದ ಮಹಾನಾಯಕರು. ಶ್ರೀನಿವಾಸಪ್ರಸಾಸ್ ಅವರು ಜನಪ್ರಿಯ ನಾಯಕರಾಗಿ ಅನೇಕ ಕಾರ್ಯಕ್ರಮಗಳು, ಯೋಜನೆಗಳನ್ನು ಜಿಲ್ಲೆಗೆ ತಂದು ಅಭಿವೃದ್ಧಿ ಕಾರಣೀಭೂತರಾಗಿದ್ದಾರೆ. ಅವರ ಅಗಲಿಕೆಯಿಂದ ಜಿಲ್ಲೆ, ರಾಜ್ಯಕ್ಕೆ ಅಪಾರ ನಷ್ಟ ಉಂಟಾಗಿದೆ. ಅವರ ಆತ್ಮಕ್ಕೆ ಶಾಂತಿ ನೆಲೆಸಲಿ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಆಶಿಸಿದರು.

    ಬಿಜೆಪಿ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಆರ್.ಸುಂದರ್, ಪ್ರಧಾನ ಕಾರ್ಯದರ್ಶಿ ಹೊನ್ನೂರು ಮಹದೇವಸ್ವಾಮಿ, ನಗರ ಮಂಡಲ ಅಧ್ಯಕ್ಷ ಶಿವರಾಜು, ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಸೂರ್ಯಕುಮಾರ್, ಪ್ರಧಾನ ಕಾರ್ಯದರ್ಶಿ ಆನಂದ್‌ಭಗೀರಥ್, ಎಸ್‌ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಮೂಡಹಳ್ಳಿ ಮೂರ್ತಿ, ಪ್ರಧಾನ ಕಾರ್ಯದರ್ಶಿ ಮುತ್ತಿಗೆ ಮೂರ್ತಿ, ನಗರ ಮಂಡಲ ಅಧ್ಯಕ್ಷ ಪರಶಿವಯ್ಯ, ರಾಜಪ್ಪ, ಕೂಸಣ್ಣ, ಚೂಡಾ ಮಾಜಿ ಅಧ್ಯಕ್ಷ ಕುಲಗಾಣಶಾಂತಮೂರ್ತಿ, ಚಂದ್ರಶೇಖರ್, ವೇಣುಗೋಪಾಲ್, ಬಲವೀರ್‌ಸಿಂಗ್, ಹೈಟೆಕ್ ಶಿವು, ಚಂದ್ರಶೇಖರ್, ಸಿ.ಡಿ.ಪ್ರಕಾಶ್, ಗಿರೀಶ್, ಶಿವಣ್ಣ, ಮಹದೇವಯ್ಯ ಇತರರು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts