More

    ಸುಮಾರು 13 ಲಕ್ಷ ರೂ. ಕಾಮಗಾರಿಗೆ ಶಾಸಕರಿಂದ ಚಾಲನೆ

    ಚಾಮರಾಜನಗರ: ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಶಿಕ್ಷಕರ ಭವನದ ಒಳಸಭಾಂಗಣ ನಿರ್ಮಾಣ ಹಾಗೂ ಸಿದ್ದಯ್ಯನಪುರ ಗ್ರಾಮದಲ್ಲಿ ರಂಗಮಂದಿರ ನಿರ್ಮಾಣ ಕಾಮಗಾರಿಗೆ ಎಂಎಸ್‌ಐಎಲ್ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.

    ನಗರದ ಶ್ರೀಭುವನೇಶ್ವರಿ ವೃತ್ತದಲ್ಲಿರುವ ಶಿಕ್ಷಕರ ಭವನದಲ್ಲಿ ಸುಮಾರು 5 ಲಕ್ಷ ರೂ. ವೆಚ್ಚದಲ್ಲಿ ಒಳಸಭಾಂಗಣ ನಿರ್ಮಾಣ ಹಾಗೂ ಸಿದ್ದಯ್ಯನಪುರ ಗ್ರಾಮದಲ್ಲಿ ಸುಮಾರು 8 ಲಕ್ಷ ರೂ. ವೆಚ್ಚದಲ್ಲಿ ರಂಗಮಂದಿರ ನಿರ್ಮಾಣ ಒಳಗೊಂಡಂತೆ ಒಟ್ಟು 13 ಲಕ್ಷ ರೂ. ಕಾಮಗಾರಿಗೆ ಶಾಸಕರು ಚಾಲನೆ ನೀಡಿ ಮಾತನಾಡಿ, ಶಿಕ್ಷಕರ ಭವನಕ್ಕೆ ಒಳ ಸಭಾಂಗಣ ಇಲ್ಲದೆ ಸಭೆಗಳನ್ನು ನಡೆಸಲು ಸಾಕಷ್ಟು ಸಮಸ್ಯೆಯುಂಟಾಗುತ್ತಿತ್ತು. ಶಿಕ್ಷಕರೆಲ್ಲರೂ ಕೂಡಾ ಮನವಿ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಈ ಕಾಮಗಾರಿ ಕೈಗೊಳ್ಳಲಾಗಿದೆ.

    ಸಿದ್ದಯ್ಯನಪುರ ಗ್ರಾಮದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿವೆ. ರಸ್ತೆ, ಕುಡಿಯುವ ನೀರು, ಚರಂಡಿ, ಸಮುದಾಯ ಭವನ, ಬೀದಿ ದೀಪ, ಸೇತುವೆ ನಿರ್ಮಾಣ, ರೈತರಿಗೆ ಗಂಗಾ ಕಲ್ಯಾಣ, ಆಶ್ರಯ ಮನೆಗಳು ಹೀಗೆ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ನನ್ನ ಅವಧಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದರು.

    ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಸವಣ್ಣ, ಸದಸ್ಯರಾದ ಸೋಮಣ್ಣ, ಶೈಲಜಾ ಗೋವಿಂದರಾಜು, ಮಂಜು, ಮಹದೇವಮ್ಮ, ರೇಖಾ, ಯಜಮಾನರಾದ ಮೂರ್ತಿ, ಪಾಪಣ್ಣ, ಬಸವಯ್ಯ, ಮುಖಂಡರಾದ ಹನುಮಂತು, ಶಿವಬಸವಣ್ಣ, ರಮೇಶ್, ನಂಜುಂಡಸ್ವಾಮಿ, ನೀರು ಬಳಕೆದಾರರ ಸಂಘದ ಅಧ್ಯಕ್ಷ ಗೋವಿಂದರಾಜು, ನಿರ್ಮಿತಿ ಕೇಂದ್ರದ ಇಂಜಿನಿಯರ್ ಭೀಮ್ ಸಾಗರ್ ಇತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts