ನವದೆಹಲಿ: ಪೌರತ್ವ ಕಾಯ್ದೆ ಜಾರಿ ವಿರುದ್ಧ ಪ್ರತಿಭಟನೆ ನಡೆಸಿದ ಆರೋಪದಲ್ಲಿ ಪೊಲೀಸರು ಬಂಧಿಸಿದ್ದ ಭೀಮ್ ಆರ್ಮಿಯ ಮುಖ್ಯಸ್ಥ ಚಂದ್ರಶೇಖರ್ ಅಜಾದ್ಗೆ ದೆಹಲಿ ಹೆಚ್ಚವರಿ ಸೆಷನ್ಸ್ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಉಳಿದುಕೊಳ್ಳುವಂತಿಲ್ಲ ಎಂದು ಷರತ್ತು ವಿಧಿಸಿ ಹೆಚ್ಚುವರಿ ಸೆಷನ್ಸ್ ಕೋರ್ಟ್ ನ್ಯಾಯಾಧೀಶೆ ಕಾಮಿನಿ ಲಾವೂ ಜಾಮೀನು ನೀಡಿದರು.
ಪೌರತ್ವ ಕಾಯ್ದೆ ಜಾರಿ ವಿರೋಧಿಸಿ ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಚಂದ್ರಶೇಖರ್ ಅಜಾದ್ ಅವರು ಜಾಮಾ ಮಸೀದಿಯಲ್ಲಿ ಜನ ಸಮೂಹವನ್ನು ಪ್ರಚೋಚಿಸಿದ ಭಾಷಣ ಮಾಡಿದ ಆರೋಪದ ಮೇಲೆ 25 ದಿನಗಳ ಹಿಂದೆ ಪೊಲೀಸರು ಬಂಧಿಸಿದ್ದರು. ಅಜಾದ್ ಅವರನ್ನು ತಿಹಾರ್ ಜೈಲಿನಲ್ಲಿ ಇಡಲಾಗಿತ್ತು. ಜಾಮೀನು ದೊರೆತ ಹಿನ್ನೆಲೆಯಲ್ಲಿ ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಚಂದ್ರಶೇಖರ್ ಅಜಾದ್ ಅವರು ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ದೆಹಲಿಯಲ್ಲಿ ಉಳಿಯುವಂತಿಲ್ಲ. ಅವರು ದೆಹಲಿಗೆ ಚಿಕಿತ್ಸೆಗೆ ಬರಬೇಕಾದರೆ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಕೋರ್ಟ್ ಷರತ್ತು ವಿಧಿಸಿದೆ.
ದೆಹಲಿ ಪೊಲೀಸರು ಕೋರ್ಟ್ಗೆ ಚಂದ್ರಶೇಖರ್ ಅಜಾದ್ ಜನರನ್ನು ಪ್ರಚೋದಿಸುವ ಭಾಷಣ ಮಾಡಿರುವುದಕ್ಕೆ ಪುರಾವೆ ಒದಗಿಸಲು ವಿಫಲರಾದರು. ಹೀಗಾಗಿ ಕೋರ್ಟ್ ಅವರಿಗೆ ಜಾಮೀನು ನೀಡಿದೆ. (ಏಜೆನ್ಸೀಸ್)