More

    ಚನ್ನಗಿರಿಯಲ್ಲಿ 10 ಸಾವಿರ ಕುಟುಂಬಗಳಿಗೆ ಆಹಾರದ ಕಿಟ್

    ಚನ್ನಗಿರಿ: ಜನರು ಕಡ್ಡಾಯವಾಗಿ ಮಾಸ್ಕ್ ಧರಿಸುವ ಮೂಲಕ ಕರೊನಾ ತಡೆಗೆ ಸಹಕಾರ ನೀಡಬೇಕೆಂದು ಶಾಸಕ ಮಾಡಾಳು ವಿರೂಪಾಕ್ಷಪ್ಪ ತಿಳಿಸಿದರು.

    ತಾಲೂಕಿನ ಸಂತೇಬೆನ್ನೂರು ಗ್ರಾಮದಲ್ಲಿ ಭಾನುವಾರ ಮೂರು ಲಕ್ಷ ಮಾಸ್ಕ್‌ಗಳನ್ನು ಪ್ರತಿ ಮನೆಗಳಿಗೆ ಹಂಚುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

    ಕರೊನಾ ತಡೆಗಟ್ಟುವ ಸಲುವಾಗಿ ಚನ್ನಗಿರಿ ಪಟ್ಟಣ ಹಾಗೂ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ 252 ಗ್ರಾಮಗಳ ಎಲ್ಲ ಕುಟುಂಬಗಳಿಗೆ ಮಾಸ್ಕ್ ವಿತರಿಸಲು ಅನೇಕ ಬಾರಿ ಅಧಿಕಾರಿಗಳು ಹಾಗೂ ಸಾರ್ವಜನಿಕರ ಜತೆ ಚರ್ಚೆ ಮಾಡಲಾಗಿದೆ. ನನ್ನ ಕ್ಷೇತ್ರದ ಜನರ ಆರೋಗ್ಯ ನನಗೆ ಮುಖ್ಯ. ಜಾತಿ-ಮತ ನೋಡದೇ ಎಲ್ಲರಿಗೂ ಮಾಸ್ಕ್ ವಿತರಣೆ ಮಾಡಲಾಗುತ್ತಿದೆ. ಕಡಿಮೆ ಬಂದರೆ ತರಿಸಿಕೊಡುವುದಾಗಿ ಹೇಳಿದರು.

    ಕರೊನಾ ಮೂರನೇ ಹಂತ ತಲುಪಿದರೆ ಜನ ಜೀವನ ಕಷ್ಟವಾಗಲಿದೆ. ಇದಕ್ಕೆ ಔಷಧವೂ ಇಲ್ಲ. ಮನೆಯಲ್ಲಿರುವ ಮೂಲಕ ರೋಗ ತಡೆಯಬಹುದಾಗಿದೆ. ಸರ್ಕಾರ ಕಠಿಣ ಕ್ರಮ ತೆಗೆದುಕೊಂಡರೂ ಜನರು ಮನೆಯಿಂದ ಹೊರಗೆ ಬರುತ್ತಿದ್ದಾರೆ. ಜನರ ಜೀವಕ್ಕೆ ಮೊದಲ ಆದ್ಯತೆ ನೀಡಬೇಕಿದೆ. ತಾಲೂಕಿನ ಅಧಿಕಾರಿಗಳು, ವೈದ್ಯರು, ಮಾಧ್ಯಮದವರು ತಮ್ಮ ಕುಟುಂಬ ಮರೆತು, ರಾತ್ರಿ-ಹಗಲು ಜನರ ಆರೋಗ್ಯಕ್ಕಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

    ಚನ್ನಗಿರಿ ವಿಧಾನಸಭಾ ಕೇತ್ರ ವ್ಯಾಪ್ತಿಯ 10 ಸಾವಿರ ಕಡು ಬಡ ಕುಟುಂಬಗಳನ್ನು ಗುರುತಿಸಿದ್ದು, ಎಲ್ಲ ಕುಟುಂಬಗಳಿಗೆ ಆಹಾರದ ಕಿಟ್ ಒದಗಿಸಲಾಗುತ್ತದೆ. ಪ್ರತಿ ಮನೆಗೆ ತಾಲೂಕು ಆಡಳಿತದ ಅಧಿಕಾರಿಗಳ ಮೂಲಕ ಮಾಸ್ಕ್ ವಿತರಿಸಲಾಗುತ್ತದೆ ಎಂದರು.

    ತಹಸೀಲ್ದಾರ್ ಎನ್.ಜೆ.ನಾಗರಾಜ್, ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಎಂ.ಆರ್.ಪ್ರಕಾಶ್, ಸಿಪಿಐ ಆರ್.ಆರ್.ಪಾಟೀಲ್, ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವರಾಜ್, ಪಿಎಸ್‌ಐ ಶಿವರುದ್ರಪ್ಪ ಮೇಟಿ ಇದ್ದರು. 

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts