More

    ಬದು ನಿರ್ಮಾಣ ಕಾಮಗಾರಿಗೆ ಚಾಲನೆ

    ಚನ್ನರಾಯಪಟ್ಟಣ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಿರ್ದೇಶನದ ಮೇರೆಗೆ ಮೇ 19 ರಿಂದ ಜೂ.19ರ ವರಗೆ ಒಂದು ತಿಂಗಳ ಕಾಲ ಬದು ನಿರ್ಮಾಣ ಕಾಮಗಾರಿ ಕಾರ್ಯಕ್ರಮ ಜರುಗಲಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.

    ತಾಲೂಕಿನ ದಿಂಡಗೂರು ಗ್ರಾಮದಲ್ಲಿ ತಾಲೂಕು ಕೃಷಿ ಇಲಾಖೆ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಬದು ನಿರ್ಮಾಣ ಕಾಮಗಾರಿ ಮಾಸಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಯೋಜನೆಯನ್ನು ತಾಲೂಕಿನ ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

    ತಾಲೂಕಿನ 41 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಬದು ನಿರ್ಮಾಣ ಕಾಮಗಾರಿಗೆ ಈಗಾಗಲೇ ಚಾಲನೆ ನೀಡಿದ್ದು, ತಾಲೂಕಿನಲ್ಲಿ ಕೃಷಿಹೊಂಡ ಹಾಗೂ ಬದು ನಿರ್ಮಾಣ ಕಾಮಗಾರಿಯಿಂದ ಕೂಲಿ ಕಾರ್ಮಿಕರಿಗೆ 8 ಲಕ್ಷ ಮಾನವ ದಿನಗಳು ಸೃಷ್ಟಿಯಾಗಲಿವೆ ಎಂದು ತಿಳಿಸಿದರು.

    ದಿಂಡಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಂಜಮ್ಮ, ಉಪಾಧ್ಯಕ್ಷ ಆನಂದ್, ತಾಲೂಕು ಕಾರ್ಯನಿರ್ಹಣಾಧಿಕಾರಿ ಎಚ್.ಎಸ್.ಚಂದ್ರಶೇಖರ್, ಸಕಾಯಕ ನಿರ್ದೇಶಕ ಬಿ.ಬಿ.ಹರೀಶ್, ತಾಲೂಕು ಐಇಸಿ ಸಂಯೋಜಕ ಚಂದ್ರನಾಯಕ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ರಶ್ಮಿ, ಪಿಡಿಒ ನಂಜುಂಡೇಗೌಡ ಹಾಗೂ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts