ಗಂಗಾವತಿ (ಕೊಪ್ಪಳ) : ತಾಲೂಕಿನ ಆನೆಗೊಂದಿ ಸಮೀಪದ ವಾಲಿಕಿಲ್ಲಾ ಬಳಿ ದೇವಸ್ಥಾನದಲ್ಲಿ ಅಡುಗೆ ಭಟ್ಟನಾಗಿದ್ದ ಯುವಕನನ್ನು ಗುರುವಾರ ಬೆಳಗಿನ ಜಾವ ಚಿರತೆ ದಾಳಿ ನಡೆಸಿ ತಿಂದು ಹಾಕಿದ ಘಟನೆ ನಡೆದಿದೆ.
ಮೇಗೋಟೆ ದುರ್ಗಾ ಬೆಟ್ಟದ ದೇಗುಲವೊಂದರಲ್ಲಿ ಅಡುಗೆ ಭಟ್ಟನಾಗಿ ಕೆಲಸ ಮಾಡುತ್ತಿದ್ದ ಹುಲಗೇಶ್ ಈರಪ್ಪ ಮಡ್ಡೇರ್ (24) ನಿದ್ದೆಯಲ್ಲಿದ್ದಾಗ ಚಿರತೆ ದಾಳಿ ಮಾಡಿದೆ. ಸುಮಾರು ಒಂದು ಕಿ.ಮೀ ದೂರದ ಕಾಡುಪೊದೆಯೊಳಗೆ ಹೊತ್ತೊಯ್ದು ಅರೆಬರೆಯಾಗಿ ತಿಂದು ಹಾಕಿದೆ.
ಇದನ್ನೂ ಓದಿ: ಇಂದು ಮುಂಬೈ-ಡೆಲ್ಲಿ ನಡುವೆ ಮೊದಲ ಕ್ವಾಲಿಫೈಯರ್ ಹಣಾಹಣಿ, ಗೆದ್ದವರು ಫೈನಲ್ಗೆ
ಘಟನೆ ಬೆಳಕಿಗೆ ಬರುತ್ತಿದ್ದಂತೆ ಆನೆಗೊಂದಿ ಸುತ್ತಮುತ್ತಲಿನ ಜನ ಬೆಚ್ಚಿ ಬಿದ್ದಿದ್ದಾರೆ. ಇತ್ತೀಚೆಗಷ್ಟೆ ದೇವಸ್ಥಾನಕ್ಕೆ ಆಗಮಿಸಿದ್ದ ಬಾಲಕನ ಮೇಲೆ ಚಿರತೆ ದಾಳಿಗೆ ಯತ್ನಿಸಿತ್ತು. ಬಳಿಕ ಅರಣ್ಯಾಧಿಕಾರಿಗಳಿಗಳು ಬೋನು ಇಟ್ಟು ಹೆಣ್ಣು ಚಿರತೆಯನ್ನು ಸೆರೆಹಿಡಿದಿದ್ದರು. ಮತ್ತೆ ಚಿರತೆ ದಾಳಿ ಮುಂದುವರೆದಿದ್ದು, ಜನರು ಭಯಭೀತರಾಗಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಗ್ರ ನಿಗ್ರಹ ಕುರಿತ ಭಾರತದ ವಾರ್ಷಿಕ ನಿರ್ಣಯ ವಿಶ್ವಸಂಸ್ಥೆ ಸಾಮಾನ್ಯಸಭೆಯಲ್ಲಿ ಸ್ವೀಕೃತ