More

    ಚೆನ್ನೈ-ಮೈಸೂರು ನಡುವೆ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು; ಪ್ರಾಯೋಗಿಕ ಸಂಚಾರ ಆರಂಭ

    ಬೆಂಗಳೂರು: ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಇಂದಿನಿಂದ (ನ.07)ಪ್ರಾಯೋಗಿಕ ಸಂಚಾರ ಆರಂಭಿಸಿದೆ.

    ಚೆನ್ನೈ-ಮೈಸೂರು ನಡುವೆ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು; ಪ್ರಾಯೋಗಿಕ ಸಂಚಾರ ಆರಂಭಭಾನುವಾರ ರಾತ್ರಿ ಚೆನ್ನೈನ ಎಂ.ಜಿ. ರಾಮಚಂದ್ರನ್ ರೈಲ್ವೇ ನಿಲ್ದಾಣದಿಂದ ಸಂಚಾರ ಆರಂಭಿಸಿದ್ದು, ಇಂದು ಬೆಂಗಳೂರು ತಲುಪಿದೆ. ಪೆರಂಬದೂರಿನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ ತಯಾರಾದ ಈ ರೈಲು, ದೇಶದ ಮೊದಲ ಅತಿವೇಗದ ರೈಲು ಎಂಬ ಖ್ಯಾತಿಗೆ ಪಾತ್ರವಾಗಿದೆ.

    ನ.11ರಂದು ಪ್ರಧಾನಿ ಮೋದಿ, ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದಾರೆ. ಈ ಹಿನ್ನಲೆಯಲ್ಲಿ ತಾಂತ್ರಿಕ ದೋಷ ಪತ್ತೆಗಾಗಿ ಪ್ರಾಯೋಗಿಕವಾಗಿ ಸಂಚಾರ ಆರಂಭಿಸಲಾಗಿದೆ.

    ಇಂದು ಬೆಳಗ್ಗೆ 10.20ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಆಗಮಿಸಿದ ರೈಲು, ತಕ್ಷಣ ಮೈಸೂರಿಗೆ ತೆರಳಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts