More

    ಛತ್ತೀಸ್‌ಗಢದಲ್ಲಿ ಮಾವೋವಾದಿಗಳಿಂದ ಬಿಜೆಪಿ ನಾಯಕನ ಹತ್ಯೆ

    ರಾಯ್‌ಪುರ: ಛತ್ತೀಸ್‌ಗಢದಲ್ಲಿ ಮಾವೋವಾದಿಗಳು ಚುನಾವಣಾ ಪ್ರಚಾರದಲ್ಲಿದ್ದ ಬಿಜೆಪಿ ನಾಯಕನನ್ನು ಹತ್ಯೆ ಮಾಡಿದ್ದಾರೆ.
    ನಾರಾಯಣಪುರ ಬಿಜೆಪಿಯ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿದ್ದ ರತನ್ ದುಬೆ ಹತ್ಯೆಗೀಡಾದವರು. ಮೊದಲ ಹಂತದ ಮತದಾನಕ್ಕೆ ಮೂರು ದಿನಗಳು ಮಾತ್ರ ಬಾಕಿ ಇರುವಾಗ ಮಾವೋವಾದಿಗಳು ದುಷ್ಕೃತ್ಯವೆಸಗಿದ್ದಾರೆ.

    ಇದನ್ನೂ ಓದಿ: ಮುಖೇಶ್ ಅಂಬಾನಿಗೆ ಕೊಲೆ ಬೆದರಿಕೆ- ತೆಲಂಗಾಣದ 19 ವರ್ಷದ ಯುವಕನ ಸೆರೆ
    ರತನ್​ ದುಬೆ ಚುನಾವಣಾ ಪ್ರಚಾರದಲ್ಲಿದ್ದರು, ಕೌಶಲನರ್ ಪ್ರದೇಶದಲ್ಲಿ ಶನಿವಾರ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
    ದುಬೆ ಅವರು ಜಿಲ್ಲಾ ಪಂಚಾಯತ್‌ ಸದಸ್ಯರಾಗಿದ್ದು ಕೌಶಲನೇರ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಹತ್ಯೆಯ ತನಿಖೆಗಾಗಿ ತಂಡವೊಂದು ಸ್ಥಳಕ್ಕೆ ತಲುಪಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ರಾಜ್ಯದಲ್ಲಿ ನವೆಂಬರ್ 7 ಮತ್ತು 17 ರಂದು ಎರಡು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

    ಜನವರಿ ಒಳಗಡೆ ಈ ಸರ್ಕಾರ ಪತನವಾಗುತ್ತೆ: ಕಟೀಲ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts