blank

Chhattisgarh Encounter: ಛತ್ತೀಸ್​ಗಢ ಎನ್​ಕೌಂಟರ್​, ಮೂವರು ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ

Chhattisgarh Encounter

ನಾರಾಯಣಪುರ: ಛತ್ತೀಸ್​ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜತೆ ನಡೆದ ಎನ್​ಕೌಂಟರ್​ನಲ್ಲಿ (Chhattisgarh Encounter) ಇಬ್ಬರು ಪುರುಷರು ಮತ್ತು ಒಬ್ಬ ಮಹಿಳೆ ಸೇರಿದಂತೆ ಮೂವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ನಾರಾಯಣಪುರ ಪೊಲೀಸರು ವರದಿ ಮಾಡಿದ್ದಾರೆ.

blank

ಛತ್ತೀಸ್‌ಗಢ-ಮಹಾರಾಷ್ಟ್ರ ಗಡಿಯ ಅಭುಜ್​ಮಾದ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಕಾರ್ಯಚರಣೆ ನಡೆಸುವಾಗ ಸೋಮವಾರ ಸಂಜೆ ಸುಮಾರು 4 ಗಂಟೆಗೆ ಗುಂಡಿನ ಚಕಮಕಿ ನಡೆದಿದ್ದು , ಈ ಕಾರ್ಯಚರಣೆಯಲ್ಲಿ ಮೂವರು ನಕ್ಸಲರನ್ನು ಮೃತಪಟ್ಟಿದ್ದಾರೆ.

ಇದನ್ನೂ ಓದಿ: Secularism | ಜಾತ್ಯತೀತತೆ ಯುರೋಪಿಯನ್ ಪರಿಕಲ್ಪನೆ, ಭಾರತದಲ್ಲಿ ಅಗತ್ಯವಿಲ್ಲ: ತಮಿಳುನಾಡು ರಾಜ್ಯಪಾಲ

ಘಟನಾ ಸ್ಥಳದಿಂದ ಎಕೆ-47 ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮಹಾರಾಷ್ಟ್ರದ ನಾರಾಯಣಪುರ ಜಿಲ್ಲೆಯ ಗಡಿಗೆ ಸಮೀಪವಿರುವ ಮಾದ್ ಪ್ರದೇಶದಲ್ಲಿ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಸೋಮವಾರ ಸಂಜೆ 4 ಗಂಟೆಗೆ ಪಡೆಗಳು ಮತ್ತು ಮಾವೋವಾದಿಗಳ ನಡುವೆ ಎನ್‌ಕೌಂಟರ್ ಆರಂಭವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎನ್​ಕೌಂಟರ್​ನಲ್ಲಿ ಭದ್ರತಾ ಪಡೆ ಪ್ರಭಾವಿ ಕಮಾಂಡರ್ ಶಂಕರ್ ರಾವ್​ರನ್ನು ಕೊಲ್ಲುವಲ್ಲಿ ಯಶಸ್ವಿಯಾಗಿದೆ. ಅವರನ್ನು ಹಿಡಿದುಕೊಟ್ಟವರಿಗೆ 25 ಲಕ್ಷ ರೂ. ಬಹುಮಾನ ನೀಡುವುದಾಗಿ ಈ ಮೊದಲು ಘೋಷಿಸಲಾಗಿತ್ತು. ಛತ್ತೀಸ್​ಗಢದ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಎನ್​ಕೌಂಟರ್​ನ್ನು ನಕ್ಸಲೀಯರ ಮೇಲಿನ ಸರ್ಜಿಕಲ್ ಸ್ಟ್ರೈಕ್ ಎಂದು ಕರೆದಿದ್ದಾರೆ. ಇದರ ಸಂಪೂರ್ಣ ಶ್ರೇಯ ಭದ್ರತಾ ಪಡೆಗೆ ಸಲ್ಲುತ್ತದೆ ಎಂದರು.

Israeli Strikes | ಲೆಬನಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ 182 ಮಂದಿ ಸಾವು, 700 ಮಂದಿಗೆ ಗಾಯ

Share This Article
blank

ತುಪ್ಪ ತಿನ್ನೋದರಿಂದ ದಪ್ಪಾ ಆಗ್ತಾರಾ? ಯಾವ ಸಮಯದಲ್ಲಿ ಸೇವಿಸುವುದು ಬೆಸ್ಟ್​, ಇಲ್ಲಿದೆ ಉತ್ತರ | Ghee

Ghee Benefits: ತುಪ್ಪ ಬಹುತೇಕರಿಗೆ ಇಷ್ಟ. ತಾವು ಸೇವಿಸುವ ಆಹಾರದಲ್ಲಿ ತುಪ್ಪವಿದ್ದರೆ ವಿಶೇಷ ರುಚಿ ಎಂದು…

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

blank