ಬೆಳಗಾವಿ: ರಾಜ್ಯದಲ್ಲಿ ಕರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಉದ್ದೇಶಕ್ಕಾಗಿ ಬುಡಾ ಅಧ್ಯಕ್ಷ ಗೂಳಪ್ಪ ಹೊಸಮನಿ ತಮ್ಮ 2 ತಿಂಗಳ ಗೌರವಧನ ( 24 ಸಾವಿರ ರೂ.) ಚೆಕ್ಅನ್ನು ಸೋಮವಾರ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಮೂಲಕ ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದರು. ಶಾಸಕ ಅಭಯ ಪಾಟೀಲ, ಬುಡಾ ಆಯುಕ್ತ ಪ್ರೀತಂ ನಸ್ಲಾಪುರೆ ಇತರರು ಇದ್ದರು.