blank

ಆಜಾನ್ ಧ್ವನಿ ಕೇಳಿ ಭಾಷಣ ನಿಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

cm

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಶಿವಾಜಿನಗರದಲ್ಲಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ವೇಳೆ ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ಪ್ರಸಂಗ ನಡೆಯಿತು.

ಇದನ್ನೂ ಓದಿ: ಕೋಲ್ಕತ್ತಾ: ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಮಸೂದೆ ಮಂಡಿಸಲಿದೆ ಮಮತಾ ಬ್ಯಾನರ್ಜಿ ಸರ್ಕಾರ

ಸಿಎಂ ಸಿದ್ದರಾಮಯ್ಯ ಭಾಷಣ ನಿಲ್ಲಿಸಲು ಕಾರಣವಾಗಿದ್ದು ಆಜಾನ್ (ನಮಾಜ್). ಸಿದ್ದರಾಮಯ್ಯನವರು ಮಾತನಾಡುತ್ತಿದ್ದ ಸಂದರ್ಭದಲ್ಲಿ ಆಜಾನ್ ಪ್ರಾರಂಭವಾದ ಹಿನ್ನೆಲೆಯಲ್ಲಿ 5 ನಿಮಿಷ ಭಾಷಣ ನಿಲ್ಲಿಸಿ ಗೌರವ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಇದ್ದವರೂ ಮೌನಕ್ಕೆ ಶರಣಾದರು. ಆಜಾನ್‌ ಮುಗಿದ ನಂತರ ಸಿದ್ದರಾಮಯ್ಯ ಭಾಷಣವನ್ನು ಮುಂದುವರಿಸಿದರು.

ಸಿಎಂ ಸಿದ್ದರಾಮಯ್ಯ ಅವರು ಇಂದು (ಆಗಸ್ಟ್ 2) ಬೆಂಗಳೂರಿನ ಶಿವಾಜಿನಗರದ ಬ್ರಾಡ್​ವೇ ರಸ್ತೆಯಲ್ಲಿರುವ ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದರು.

ಶಿವಾಜಿನಗರದಲ್ಲಿರುವ ಈ ಆಸ್ಪತ್ರೆಯು ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಅಧೀನದಲ್ಲಿದ್ದು ಇಂದು ಇದನ್ನು ಇಂದು ಅಧಿಕೃತವಾಗಿ ಮುಖ್ಯಮಂತ್ರಿ, ಡಿಸಿಎಂ ಸೇರಿದಂತೆ ಸಚಿವರು ಶಾಸಕರು ಸೇರಿಕೊಂಡು ಉದ್ಘಾಟಿಸಿದರು.

24.38 ಕೋಟಿ ರೂ,ವೆಚ್ಚದಲ್ಲಿ ಬಿಬಿಎಂಪಿ ವತಿಯಿಂದ 2020ರಲ್ಲಿ ನಿರ್ಮಿಸಲಾಗಿದ್ದ ಈ ಆಸ್ಪತ್ರೆಗೆ ವೈದ್ಯರು ಹಾಗೂ ಸಿಬ್ಬಂದಿಯ ನೇಮಕಾತಿ ಆಗಿರಲಿಲ್ಲ. ಇದರಿಂದ ಕಾರ್ಯಾರಂಭಗೊಂಡಿರಲಿಲ್ಲ. ಈಗ ಆಸ್ಪತ್ರೆಗೆ ಅಗತ್ಯ ವೈದ್ಯರು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಐಸಿಯುದಲ್ಲಿನ 20 ಹಾಸಿಗೆಗಳು ಸೇರಿ ಒಟ್ಟು 130 ಹಾಸಿಗೆಗಳ 4 ಮಹಡಿಗಳ ಈ ಆಸ್ಪತ್ರೆ ಒಳಗೊಂಡಿದೆ.

ಪಂಚ ಗ್ಯಾರಂಟಿಗಳ ಜೊತೆ ಶಿಕ್ಷಣ, ಆರೋಗ್ಯದ ಗ್ಯಾರಂಟಿ ಸರ್ಕಾರದ ಗುರಿ: ಡಿ.ಕೆ ಶಿವಕುಮಾರ್

Share This Article

ಈ ಆರೋಗ್ಯ ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ತುಪ್ಪವನ್ನು ತಿನ್ನಲೇ ಬಾರದು ಗೊತ್ತಾ? ghee benefits and risks

ಬೆಂಗಳೂರು: ( ghee benefits and risks) ಹಾಲಿನ ಉತ್ಪನ್ನಗಳು ಆರೋಗ್ಯಕ್ಕೆ ಒಳ್ಳೆಯದು.  ತುಪ್ಪ ಹಲವು…

ಬಿಸಿಲಿನ ವಾತಾವರಣದಲ್ಲಿ ನಿಮ್ಮ ಕಾರಿನೊಳಗೆ ತಂಪಾಗಿರಲು ಬಯಸುವಿರಾ? ಈ ಟ್ರಿಕ್ ಟ್ರೈ ಮಾಡಿ.. Summer Car Tips

ಬೆಂಗಳೂರು: (Summer Car Tips ) ಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿಸಿಲಿಇಂದ ರಕ್ಷಣೆ ಪಡೆಯಲು…

ಹಠಾತ್ತನೆ ಮದ್ಯಪಾನ ತ್ಯಜಿಸುವುದರಿಂದ ಸಾಯ್ತಾರಾ? ಆಲ್ಕೋಹಾಲ್​ ಬಿಡುವುದಾದ್ರೂ ಹೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ… | Alcohol

Alcohol: ಮದ್ಯಪಾನದಿಂದ ಉಂಟಾಗುವ ಸಾವುಗಳ ಕುರಿತು ಬ್ರಿಟನ್​ನ ರಾಷ್ಟ್ರೀಯ ಅಂಕಿ ಅಂಶಗಳ ಕಚೇರಿ(ONS) ಅಘತಕಾರಿ ಅಂಕಿ…