ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ ಆರು ಜನರ ಸಾವಿಗೆ ಕಾರಣವಾದ ಜಿಲಾಟಿನ್ ಕಡ್ಡಿ ಸ್ಫೋಟದ ಸಂಬಂಧವಾಗಿ ಕ್ವಾರಿಯ ಮಾಲೀಕನೊಬ್ಬನನ್ನು ಸೇರಿ ಐದು ಜನರನ್ನು ಬಂಧಿಸಲಾಗಿದೆ. ಈ ನಿಟ್ಟಿನಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಸಹ ಅಮಾನತುಗೊಳಿಸಲಾಗಿದೆ.
ಘಟನೆ ಸಂಭವಿಸಿದ ಭರಮವರ್ಷಿಣಿ ಕ್ರಶರ್ ಕ್ವಾರಿಯ ಪಾಲುದಾರರಾದ ರಾಘವೇಂದ್ರ ರೆಡ್ಡಿ ಎಂಬುವರನ್ನು ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯಿಂದ ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ನಿರ್ಲಕ್ಷ್ಯ ವಹಿಸಿದ ನಾಲ್ಕು ಜನ ಕ್ವಾರಿ ಸಿಬ್ಬಂದಿಯನ್ನು ಸಹ ಬಂಧಿಸಲಾಗಿದೆ. ಆದರೆ, ಕ್ವಾರಿಯ ಮತ್ತೊಬ್ಬ ಪಾಲುದಾರರಾದ ಜಿ.ಎಸ್.ನಾಗರಾಜ್ ಪೊಲೀಸರಿಂದ ತಲೆಮರೆಸಿಕೊಂಡಿದ್ದಾರೆ.
ಈ ಕೇಸಿಗೆ ಸಂಬಂಧಪಟ್ಟಂತೆ ಗುಡಿಬಂಡೆ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಮಂಜುನಾಥ್ ಮತ್ತು ಸಬ್ಇನ್ಸ್ಪೆಕ್ಟರ್ ಗೋಪಾಲ ರೆಡ್ಡಿ ಅವರನ್ನು ಕರ್ತವ್ಯ ಲೋಪದ ಆರೋಪದ ಮೇಲೆ ಸಸ್ಪೆಂಡ್ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಕಲ್ಲು ಗಣಿಗಾರಿಕೆ ಕ್ಷೇತ್ರದಲ್ಲಿ ಮಿನಿ ಟ್ರಕ್ನಲ್ಲಿ ಸಾಗಿಸಲಾಗುತ್ತಿದ್ದ ಜಿಲಾಟಿನ್ ಕಡ್ಡಿಗಳು ಸ್ಫೋಟಗೊಂಡ ಪರಿಣಾಮ ಮಂಗಳವಾರ ಆರು ಜನರು ಮರಣ ಹೊಂದಿದ್ದರು. ಈ ಬಗ್ಗೆ ರಾಜ್ಯ ಸರ್ಕಾರ ಸಿಐಡಿ ತನಿಖೆಯನ್ನು ಆದೇಶಿಸಿದೆ. ಈ ಘಟನೆಯಲ್ಲಿ ಸತ್ತವರ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್.ಎಡಿಯೂರಪ್ಪ ಘೋಷಿಸಿದ್ದಾರೆ.(ಏಜೆನ್ಸೀಸ್)
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್ಬುಕ್ ಪೇಜ್ ಲೈಕ್ ಮಾಡಿ
ಮಾರ್ಚ್ 1 ರಿಂದ 60 ವರ್ಷ ಮೇಲ್ಪಟ್ಟವರಿಗೆ, ಆಯ್ದ 45 ಮೇಲ್ಪಟ್ಟವರಿಗೆ ಕರೊನಾ ಲಸಿಕೆ ಲಭ್ಯ
“ಕಾರು, ಬೈಕಿನಂತೆ ಹೆಂಡತಿಯನ್ನೂ ನಿಮ್ಮ ಆಸ್ತಿ ಎಂದು ತಿಳಿಯಬೇಡಿ” : ಗಂಡಸರಿಗೆ ಹೈಕೋರ್ಟ್ ಕಿವಿಮಾತು