ಚಿಕ್ಕಬಳ್ಳಾಪುರ: ಶಿವಮೊಗ್ಗದ ಗಣಿ ದುರಂತ ಮಾಸುವ ಮುನ್ನವೇ ಅದೇ ರೀತಿಯ ಮತ್ತೊಂದು ದುರಂತಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಹೀರೇನಾಗವಲ್ಲಿ ಗ್ರಾಮದ ಬಳಿ ಇರುವ ಕಲ್ಲು ಗಣಿಗಾರಿಕೆಗಳು ಸಾಕ್ಷಿಯಾಗಿವೆ.
ಗಣಿಸ್ಫೋಟದ ತೀವ್ರತೆಗೆ 5 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಮೃತದೇಹಗಳೆಲ್ಲ ಛಿದ್ರ ಛಿದ್ರವಾಗಿ ನೂರಾರು ಮೀಟರ್ ದೂರದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
ಮೃತರನ್ನು ಉಮಾಕಾಂತ್ (ಇಂಜಿನಿಯರ್), ರಾಮು (ಸ್ಥಳೀಯ ನಿವಾಸಿ). ಮಹೇಶ್ (ವಾಚ್ ಮೆನ್) ಗಂಗಾಧರ್ ಮತ್ತು ಮುರುಳಿ (ಕಂಪ್ಯೂಟರ್ ಅಪರೇಟರ್) ಎಂದು ಗುರುತಿಸಲಾಗಿದೆ. ಟಾಟಾ ಏಸ್ ಚಾಲಕ ರಿಯಾಜ್ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮತ್ತು ಜಿಲ್ಲಾಧಿಕಾರಿ ಆರ್ ಲತಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದಾರೆ.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್ಬುಕ್ ಪೇಜ್ ಲೈಕ್ ಮಾಡಿ
ಶಿವಮೊಗ್ಗದ ಗಣಿ ಸ್ಫೋಟಕ್ಕೆ ಕಾರಣವಾಯ್ತಾ ಬೀಡಿ ಚಟ? ಗುತ್ತಿಗೆದಾರ ಅರೆಸ್ಟ್
ಶಿವಮೊಗ್ಗದಲ್ಲಿ ಭೀಕರ ಸ್ಫೋಟ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ