More

    ಚಿಕ್ಕಣ್ಣ ಬಿಡುಗಡೆ ಮಾಡಿದ್ರು ‘ಸೈರನ್’ ಚಿತ್ರದ ಟೀಸರ್ …

    ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ಅವರ ಮಗ ಪ್ರವೀರ್​, ಇದೀಗ ‘ಸೈರನ್​’ ಎಂಬ ಚಿತ್ರದ ಮೂಲಕ ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಚಿತ್ರದ ಟೀಸರ್​ ಇತ್ತೀಚೆಗೆ ಬಿಡುಗಡೆಯಾಗಿದ್ದು, ‘ಉಪಾಧ್ಯಕ್ಷ’ ಖ್ಯಾತಿಯ ಚಿಕ್ಕಣ್ಣ ಟೀಸರ್​ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರಿಸಿದ್ದಾರೆ.

    ಇದನ್ನೂ ಓದಿ: ಗರ್ಭಿಣಿಯಾಗಿದ್ದರೂ ಕೆಲಸದಲ್ಲಿ ಬಿಜಿ; ಕೆಲಸ ಮಾಡಿದರಷ್ಟೇ ಆಲಿಯಾಗೆ ನೆಮ್ಮದಿಯಂತೆ..

    ಟೀಸರ್​ ಬಿಡುಗಡೆ ಮಾಡಿ ಮಾತನಾಡಿದ ಚಿಕ್ಕಣ್ಣ, ‘ರೋಡಿನಲ್ಲಿ ‘ಸೈರನ್’ ಸದ್ದಿಗೆ ಎಲ್ಲರೂ ದಾರಿ ಬಿಡುತ್ತಾರೆ. ಸ್ಯಾಂಡಲ್​ವುಡ್​​ನಲ್ಲೂ ಈ ‘ಸೈರನ್’ ಸಹ ಭಾರಿ ಸದ್ದು ಮಾಡಲಿ. ಭರ್ಜರಿ ಯಶಸ್ಸು ಕಾಣಲಿ. ಟೀಸರ್​​ನಲ್ಲೇ ಪ್ರವೀರ್ ಶೆಟ್ಟಿ ಒಳ್ಳೆಯ ಭರವಸೆ ಮೂಡಿಸಿದ್ದಾರೆ. ಅವರಿಗೂ ಒಳ್ಳೆಯದಾಗಲಿ’ ಎಂದು ಚಿಕ್ಕಣ್ಣ ಹಾರೈಸಿದರು.

    ಈ ಚಿತ್ರವನ್ನು ಪುನೀತ್​ ರಾಜಕುಮಾರ್​ ಅವರಿಗೆ ಅರ್ಪಿಸಲಾಗುತ್ತಿದೆ ಎಂದೇ ಮಾತು ಶುರು ಮಾಡಿದ ನಾಯಕ ಪ್ರವೀರ್​ ಶೆಟ್ಟಿ, ‘ಈ ಚಿತ್ರದ ನಿರ್ದೇಶಕ ರಾಜ ವೆಂಕಯ್ಯ ಅವರು ನನ್ನನ್ನು ಭೇಟಿಯಾಗಿ ಕಥೆ ಹೇಳಿದರು. ತುಂಬಾ ಇಷ್ಟವಾಯಿತು. ಬಿಜು ಶಿವಾನಂದ್ ಅವರು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ’ ಎಂದರು. ಪ್ರವೀರ್​ಗೆ ನಾಯಕಿಯಾಗಿ ಲಾಸ್ಯ ನಟಿಸಿದ್ದಾರೆ. ಈ ಚಿತ್ರವನ್ನು ಬಿಜು ಶಿವಾನಂದ ಎನ್ನುವವರು ನಿರ್ಮಿಸುತ್ತಿದ್ದಾರೆ.

    ರಾಜ ವೆಂಕಯ್ಯ ಕಳೆದ 20 ವರ್ಷಗಳಿಂದ ಚಿತ್ರರಂಗದಲ್ಲಿದ್ದಾರಂತೆ. ‘ಛಾಯಾಗ್ರಹಕನಾಗಿ, ಸಂಕಲನಕಾರನಾಗೂ ಕಾರ್ಯ ನಿರ್ವಹಿಸಿದ್ದೇನೆ. ಈಗ ‘ಸೈರನ್’ ಚಿತ್ರವನ್ನು ನಿರ್ದೇಶಿಸಿದ್ದೇನೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ. ನಾಯಕ ಪ್ರವೀರ್ ಶೆಟ್ಟಿ ತುಂಬಾ ಚೆನ್ನಾಗಿ ಅಭಿನಯಿಸಿದ್ದಾರೆ. ಆಡಿಯೋ ಬಿಡುಗಡೆ ಸಮಯದಲ್ಲಿ ಚಿತ್ರದ ಬಗ್ಗೆ ಹೆಚ್ಚು ಮಾತನಾಡುತ್ತೇನೆ’ ಎಂದರು ನಿರ್ದೇಶಕ ರಾಜ ವೆಂಕಯ್ಯ.

    ಇದನ್ನೂ ಓದಿ: ಹರೀಶ್ ರಾಜ್ @25; ಸಿನಿಪಯಣಕ್ಕೆ ಬೆಳ್ಳಿಹಬ್ಬದ ಸಂಭ್ರಮ

    ಈ ಸಂದರ್ಭದಲ್ಲಿ ನಿರ್ಮಾಪಕ ಉಮಾಪತಿ ಗೌಡ, ಲಹರಿ ವೇಲು, ಟವಿ 9 ಸಂಪಾದಕರಾದ ರಂಗನಾಥ್ ಭಾರದ್ವಾಜ್, ಶಿವಾನಂದ ಶೆಟ್ಟಿ, ಶರತ್ ಚಂದ್ರ ಸಾನಿಲ್ ಸೇರಿದಂತೆ ಹಲವರು ಚಿತ್ರತಂಡಕ್ಕೆ ಶುಭ ಹಾರೈಸಿದರು.

    ಸೆ.30ಕ್ಕಿಲ್ಲ ಮಾರ್ಟಿನ್: ಧ್ರುವ ಅಭಿನಯದ ಚಿತ್ರದ ಬಿಡುಗಡೆ ಮುಂದೂಡಿಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts