ಚಿಕ್ಕಮಗಳೂರು : ಬಿಕಾಂ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣದ ವಿಚಾರಣೆ ಅಂತ್ಯಗೊಳಿಸಿರುವ ಜೆಎಂಎಫ್ ಸಿ ಕೋರ್ಟ್ ನಾಳೆ ಮಹತ್ವದ ತೀರ್ಪು ನೀಡಲಿದೆ.
ಶೃಂಗೇರಿ ತಾಲೂಕಿನ ಮೆಣಸೆ ಗ್ರಾಮದಲ್ಲಿ 2016ರಲ್ಲಿ ಬಿಕಾಂ ವಿದ್ಯಾರ್ಥಿನಿಯನ್ನು ಆರೋಪಿಗಳಾದ ಪ್ರದೀಪ್ ಹಾಗೂ ಸಂತೋಷ್ ಎಂಬ ಯುವಕರು ಅಪಹರಿಸಿ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ ಎಂಬ ದೂರು ದಾಖಲಾಗಿತ್ತು.
ಕೋರ್ಟ್ಗೆ ಪೊಲೀಸರು ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆಯನ್ನು ಕೋರ್ಟ್ ನಡೆಸಿ ತೀರ್ಪು ಕಾಯ್ದಿರಿಸಿದೆ.
ವಿದ್ಯಾರ್ಥಿನಿ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಈ ಪ್ರಕರಣ ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. (ದಿಗ್ವಿಜಯ ನ್ಯೂಸ್)