ಬಾಲ್ಯವಿವಾಹ ಪದ್ಧತಿ ಇನ್ನೂ ಜೀವಂತ

blank

ಚನ್ನರಾಯಪಟ್ಟಣ: ಬಾಲ್ಯವಿವಾಹ ತಡೆಯುವುದು ಎಲ್ಲರ ಕರ್ತವ್ಯ ಎಂದು ಮೂರನೇ ಅಧಿಕ ಸಿವಿಲ್ ನ್ಯಾಯಾಧೀಶೆ ಸುನೀತಾ ತಿಳಿಸಿದರು.

ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಬಿಜಿಎಸ್ ಪದವಿಪೂರ್ವ ಕಾಲೇಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಪಂಚಾಯಿತಿ ಹಾಗೂ ತಾಲೂಕು ಕಚೇರಿ ಸಹಯೋಗದಲ್ಲಿ ಪಟ್ಟಣದ ಬಿಜಿಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ಬಾಲ್ಯ ವಿವಾಹ ನಿರ್ಮೂಲನೆ ಆಂದೋಲನ ಹಾಗೂ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ಜಾಗೃತಿ ದಿನ ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿ ಬಾಲ್ಯವಿವಾಹ ಹೆಚ್ಚು ನಡೆಯುತ್ತದೆ. ಇಂತಹ ಅನಿಷ್ಟ ಪದ್ಧತಿಯನ್ನು ತಡೆಗಟ್ಟಲು ಸರ್ಕಾರ ಹಲವು ಕಠಿಣ ಕಾನೂನು ರೂಪಿಸಿದ್ದರೂ ಈ ಪದ್ಧತಿ ಇನ್ನೂ ಜೀವಂತವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಉಪನ್ಯಾಸಕಿ ಸಿ.ಎಲ್.ಭಾಗ್ಯ ಮಾತನಾಡಿ, ಬಾಲ್ಯ ವಿವಾಹ ಪದ್ಧತಿ ಎನ್ನುವುದು ದೊಡ್ಡ ಪಿಡುಗು. ಇದನ್ನು ತೊಡೆದು ಹಾಕುವುದು ಎಲ್ಲರ ಕರ್ತವ್ಯ ಎಂದರು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ತಾಲೂಕು ಕಾರ್ಯದರ್ಶಿ ಸಿ.ಎನ್.ರಾಘವೇಂದ್ರ, ಜಂಟಿ ಕಾರ್ಯದರ್ಶಿ ಕಾವ್ಯಾ, ಬಿಜಿಎಸ್ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಕುಮಾರ್ ಇತರರಿದ್ದರು.

Share This Article

ಬೇಸಿಗೆಯ ಆರೋಗ್ಯಕ್ಕಾಗಿ ಇವುಗಳಿಗೆ ವಿದಾಯ ಹೇಳಿ! ಇಲ್ಲದಿದ್ದರೆ ಅನಾರೋಗ್ಯಕ್ಕೊಳಗಾಗುವುದು ಖಂಡಿತ Summer Foods

Summer Foods : ಬೇಸಿಗೆ ಕಾಲ ಆರಂಭವಾಗುತ್ತಿದ್ದಂತೆ ದೇಹದ ಉಷ್ಣತೆಯು ಸ್ವಾಭಾವಿಕವಾಗಿ ಹೆಚ್ಚಾಗುತ್ತದೆ. ಆದ್ದರಿಂದ ದೇಹವನ್ನು…

ಈ ಕೆಟ್ಟ ಅಭ್ಯಾಸಗಳು ನಿಮ್ಮ ಮನೆಯ ಶಾಂತಿ, ನೆಮ್ಮದಿ ಕೆಡಿಸುತ್ತವೆ! ಹುಷಾರ್​…Vastu Tips

Vastu Tips:  ನಮ್ಮ ದೈನಂದಿನ ಅಭ್ಯಾಸಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳು ಸಹ ನಮ್ಮ ಮನೆಯ ವಾಸ್ತುಗೆ…

ರಾತ್ರಿ ಬಾಯಿ ತೆರೆದು ಮಲಗುವುದು ಆರೋಗ್ಯಕ್ಕೆ ಒಳ್ಳೆಯದಲ್ಲ! ಇಂದೇ ಈ ಅಭ್ಯಾಸ ಬಿಟ್ಟು ಬಿಡಿ.. Sleeping Disorder

Sleeping Disorder : ಸಾಮಾನ್ಯವಾಗಿ ನಿದ್ದೆ ಮಾಡುವಾಗ ಕೆಲವರಿಗೆ  ಬಾಯಿ ತೆರೆದುಕೊಂಡು ಮಲಗುವ ಅಭ್ಯಾಸ ಇರುತ್ತದೆ.…