More

    ಮಂಜು ಶಾಲೆಯಲ್ಲಿ ಮಕ್ಕಳ ದಿನಾಚರಣೆ

    ಗದಗ: ಸ್ಥಳೀಯ ಮಂಜು ಶಿಕ್ಷಣ ಸಂಸ್ಥೆಯ ಮಂಜು ಪ್ರಾಥಮಿಕ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ ವಿಜೃಂಭಣೆಯಿAದ ಆಚರಿಸಲಾಯಿತು.
    ಈ ಸಮಾರಂಭದ ಮುಖ್ಯ ಅತಿಥಿಗಳಾಗಿ ಶಾಲಾ ಆಡಳಿತಾಧಿಕಾರಿಗಳಾದ ಶ್ರೀ ವಿನಾಯಸಿಂಗ ಎಸ್. ರಜಪೂತ ಆಗಮಿಸಿದ್ದರು. ಈ ಸಂದರ್ಭದಲ್ಲಿ ದೇಶದ ಮೊದಲ ಪ್ರದಾನಿ ಪಂಡಿತ ಜವಾಹರಲಾಲ ನೆಹರುರವರ ಭಾವಚಿತ್ರಕ್ಕೆ ಶಾಲಾ ಸಂಸತ ರಚನೆಯ ವಿದ್ಯಾರ್ಥಿಗಳಿಂದ ಪುಷ್ಪಾರ್ಪಣೆ ಮಾಡುವುದರ ಮೂಲಕ ಮಕ್ಕಳ ದಿನಾಚರಣೆಯನ್ನು ವಿಶೇಷವಾಗಿ ಸಡಗರ ಸಂಭ್ರಮದಿAದ ಆಚರಿಸಲಾಯಿತು.
    ಈ ಸಂದರ್ಭದಲ್ಲಿ ನರ್ಸರಿಯಿಂದ ೫ನೇ ವರ್ಗದವರೆಗೆ ಛದ್ಮವೇಷ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು. ಜೊತೆಗೆ ೬ ರಿಂದ ೧೦ ನೇ ತರಗತಿ ವಿದ್ಯಾರ್ಥಿಗಳಿಗೆ ನಾಟಕ, ನೃತ್ಯ, ವೇಷ ಭೂಷಣ ಹಲವಾರು ಕಾರ್ಯಕ್ರಮಗಳು ಹಮ್ಮಿಕೊಳ್ಳುವ ಮೂಲಕ ಮಕ್ಕಳ ಹಬ್ಬದ ರಸದೌತಣ ಕಾರ್ಯಕ್ರಮವನ್ನು ನಮ್ಮ ಶಾಲೆಯಲ್ಲಿ ಆಚರಿಸಲಾಯಿತು.
    ವೇದಿಕೆ ಮೇಲೆ ಶಾಲಾ ಆಡಳಿತಾಧಿಕಾರಿಗಳಾದ ವಿನಾಯಸಿಂಗ್ ಎಸ್. ರಜಪೂತ, ಪ್ರಾಥಮಿಕ ವಿಭಾಗದ ಪ್ರಧಾನ ಗುರುಗಳು ಶ್ರೀ ವಿರೇಶ ಎಸ್. ಹುಳ್ಳಿ, ಪ್ರೌಢ ವಿಭಾಗದ ಪ್ರಧಾನ ಗುರುಮಾತೆ ಎಸ್. ಮುಳ್ಳಾಳ ಹಾಗೂ ಶಾಲಾ ಸಂಸತ ರಚನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಈ ಸಮಾರಂಭ ಉದ್ದೇಶಿಸಿ ಸಹ ಶಿಕ್ಷಕಿ ಶ್ರೀಮತಿ ಶುಕ್ಲಾ, ಕಮತರ ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಥೆಯ ವತಿಯಿಂದ ಮಕ್ಕಳಿಗೆ ಸಿಹಿ ವಿತರಿಸಲಾಯಿತು. ಕಾರ್ಯಕ್ರಮ ನಿರೂಪಣೆ ಶ್ರೀಮತಿ ಬಸಮ್ಮ ಕುಮ್ಮಿ ನಡೆಸಿಕೊಟ್ಟರೆ ಕೊನೆಯಲ್ಲಿ ಶ್ರೀಮತಿ ರಾಧಾ ಹಡಗಲಿ ಇವರು ವಂದನಾರ್ಪಣೆಗೈದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts