More

    ಚಿಂಚೋಳಿ: ರೈತರ ಪಂಪ್‌ಸೆಟ್‌ಗಳಿಗೆ 7 ಗಂಟೆ ವಿದ್ಯುತ್ ನೀಡಿ

    ಚಿಂಚೋಳಿ: ರಾಜ್ಯ ಸರ್ಕಾರ ರೈತರ ಪಂಪ್‌ಸೆಟ್‌ಗಳಿಗೆ 7 ಗಂಟೆ ವಿದ್ಯುತ್ ಒದಗಿಸುವಂತೆ ಸೂಚನೆ ನೀಡಿದ್ದು, ರಾಜ್ಯಾದ್ಯಂತ ವಿದ್ಯುತ್ ಕಂಪನಿಗಳು ಸಮರ್ಪಕ ಕರೆಂಟ್ ಕೊಡುತ್ತಿವೆ. ಆದರೆ ಚಿಂಚೋಳಿ ವಿಧಾನಸಭಾ ಮತಕ್ಷೇತ್ರಕ್ಕೆ ವಿದ್ಯುತ್ ಪೂರೈಕೆಯಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಬಿಜೆಪಿ ತಾಲೂಕು ವಕ್ತಾರ ಶ್ರೀಮಂತ ಕಟ್ಟಿಮನಿ ಆರೋಪಿಸಿದ್ದಾರೆ.

    ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಚಿಂಚೋಳಿ ಕ್ಷೇತ್ರಕ್ಕೆ ಅನ್ಯಾಯ ಮಾಡಿ ಸೇಡಂಗೆ 7 ಗಂಟೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಇದರಿಂದ ಕ್ಷೇತ್ರದ ರೈತರಿಗೆ ಅನ್ಯಾಯವಾಗುತ್ತಿದ್ದು, ನೀರಿಲ್ಲದೆ ಬೆಳೆಗಳು ಒಣಗುತ್ತಿವೆ. ಕೂಡಲೇ ಜೆಸ್ಕಾಂ ಅಧಿಕಾರಿಗಳು ಹಾಗೂ ಸರ್ಕಾರ ಈ ತಾರತಮ್ಯ ನೀತಿ ಕೈಬಿಡಬೇಕು. ಮೂರು ದಿನದೊಳಗೆ ಕ್ಷೇತ್ರದ ರೈತರಿಗೆ 7 ಗಂಟೆ ವಿದ್ಯುತ್ ಪೂರೈಸಿದಿದ್ದರೆ ಅನ್ನದಾತರೊಂದಿಗೆ ಬೃಹತ್ ಹೋರಾಟ ಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts