More

    ಮಣ್ಣಲ್ಲಿ ಮಣ್ಣಾದ ಚಿರು!

    ಹೃದಯಾಘಾತದಿಂದ ನಿಧನರಾಗಿದ್ದ ಸ್ಯಾಂಡಲ್‌ವುಡ್‌ನ ಖ್ಯಾತ ನಟ ಚಿರಂಜೀವಿ ಸರ್ಜಾ ಅವರ ಅಂತ್ಯ ಸಂಸ್ಕಾರ, ಒಕ್ಕಲಿಗ ಸಂಪ್ರದಾಯದಂತೆ ಸೋಮವಾರ ಸಂಜೆ ಕನಕಪುರ ರಸ್ತೆಯ ನೆಲಗುಳಿ ಗ್ರಾಮದ ಬೃಂದಾವನ ಫಾರ್ಮ್ ಹೌಸ್‌ನಲ್ಲಿ ನಡೆಯಿತು.

    ಇದನ್ನೂ ಓದಿ: ಬೃಂದಾವನ್​ ಫಾರ್ಮ್​ನತ್ತ ಚಿರು ಅಂತಿಮ ಪ್ರಯಾಣ

    ಸೋಮವಾರ ಮಧ್ಯಾಹ್ನದ ವೇಳೆ ಚಿರು ಅವರ ಪಾರ್ಥೀವ ಶರೀರವನ್ನು ಮೆರವಣಿಗೆಯ ಮೂಲಕ ಬೃಂದಾವನ ಾರ್ಮ್ ಹೌಸ್‌ಗೆ ಕರೆದೊಯ್ಯಲಾಯಿತು. ಈ ಸಂದರ್ಭದಲ್ಲಿ ಅವರ ಅಂತಿಮ ದರ್ಶನ ಪಡೆಯುವುದಕ್ಕೆ ಜನ ರಸ್ತೆಯ ಎರಡೂ ಕಡೆಗಳಲ್ಲಿ ಸಾಲುಗಟ್ಟಿ ನಿಂತಿದ್ದರು.

    ಇನ್ನು ಬೃಂದಾವನ್ ಫಾರ್ಮ್ ಹೌಸ್‌ನಲ್ಲಿ ಕುಟುಂಬದವರು, ಮಾಧ್ಯಮದವರು ಮತ್ತು ಗಣ್ಯರನ್ನು ಹೊರತುಪಡಿಸಿ ಸಾರ್ವಜನಕರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಆದರೂ ಅಪಾರ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು. ಎಲ್ಲರ ಸಮ್ಮುಖದಲ್ಲಿ ಚಿರು ಅವರ ತಂದೆ ವಿಜಯ್ ಕುಮಾರ್ ಅಂತಿಮ ವಿಧಿ-ವಿಧಾನ ನೆರವೇರಿಸಿದರು.

    ಇದನ್ನೂ ಓದಿ: ಚಿರು ಸಾವು ಕಂಡು ನಿನ್ನೆಯಿಂದ ಹುಚ್ಚನಂತಾಗಿರುವೆ: ಜಗ್ಗೇಶ್​

    ಈ ಸಂದರ್ಭದಲ್ಲಿ ಅರ್ಜುನ್ ಸರ್ಜಾ, ತಾರಾ, ಪ್ರಜ್ವಲ್ ದೇವರಾಜ್, ‘ದುನಿಯಾ’ ವಿಜಯ್, ಸತೀಶ್ ನೀನಾಸಂ, ರವಿಶಂಕರ್ ಗೌಡ, ‘ಅಲೆಮಾರಿ’ ಸಂತು, ನಂದಕಿಶೋರ್, ಉದಯ್ ಮೆಹ್ತಾ, ‘ಅಯೋಗ್ಯ’ ಮಹೇಶ್ ಸೇರಿದಂತೆ ಕನ್ನಡ ಚಿತ್ರರಂಗದ ಹಲವು ಜನಪ್ರಿಯ ಕಲಾವಿದರು ಮತ್ತು ತಂತ್ರಜ್ಞರು ಈ ಸಂದರ್ಭದಲ್ಲಿ ಹಾಜರಿದ್ದರು.

    ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ನಿಧನ!; ಟ್ರೋಲ್​ ಆಗ್ತಿದೆ ಲೇಖಕಿ ಶೋಭಾ ಡೇ ಟ್ವಿಟರ್ ಪೋಸ್ಟ್​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts