ಸಿಂಧನೂರು: ಗಣಿತ ಸ್ಪರ್ಧೆ ವಿದ್ಯಾರ್ಥಿಗಳ ಲ್ಲಿ ಸ್ಪರ್ಧಾ ಮನೋಭಾವ ಮೂಡಿಸುವುದರೊಂದಿಗೆ ಕಾರ್ಯಕ್ಷಮತೆ ಹೆಚ್ಚಿಸಲಿ ಎಂದು ಸಮೂಹ ಸಂಪನ್ಮೂಲ ವ್ಯಕ್ತಿ ಗಿರೀಶ್ ವಿ. ಹೇಳಿದರು.
ಕಾರ್ಯಕ್ಷಮತೆ ಹೆಚ್ಚಿಸಲಿ
ಚಿರತನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೇವರಗುಡಿ ಗ್ರಾಪಂ, ಶಿಕ್ಷಣ ಇಲಾಖೆ ಹಾಗೂ ಅಕ್ಷರ ಫೌಂಡೇಷನ್ ಸಂಯುಕ್ತಾಶ್ರಯದಲ್ಲಿ ಮಕ್ಕಳ ಗಣಿತ ಸ್ಪರ್ಧೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದರು. ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಯಲ್ಲಿ ಭಾಗವಹಿಸುವುದರಿಂದ ಅವರಲ್ಲಿರುವ ಪರೀಕ್ಷಾ ಭಯ ದೂರವಾಗಲಿದೆ. ಪರೀಕ್ಷೆ ಎದುರಿಸುವ ಧೈರ್ಯ, ವಿಶ್ವಾಸ ಹೆಚ್ಚಿಸಲಿದೆ ಎಂದು ತಿಳಿಸಿದರು.
ಇದನ್ನೂ ಓದಿ: ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ, ದಂಪತಿ ಸಾವು
ದೇವಿಕ್ಯಾಂಪ್ ವಲಯದ ಆರು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಗಣಿತ ಸ್ಪರ್ಧೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.