ಸ್ಯಾಂಡಲ್ವುಡ್ ನಟ ಚಿರಂಜೀವಿ ಸರ್ಜಾ ಅವರ ಅಂತಿಮ ಸಂಸ್ಕಾರ ಕನಕಪುರ ರಸ್ತೆಯಲ್ಲಿರುವ ನೆಲಗುಳಿಯ ಧ್ರುವ ಸರ್ಜಾ ಅವರ ಬೃಂದಾವನ ಫಾರ್ಮ್ ಹೌಸ್ನಲ್ಲಿ ನಡೆಯಲಿದೆ. ಇದೀಗ ಬೃಂದಾವನ ಫಾರ್ಮ್ನತ್ತ ಚಿರು ಅವರ ಪಾರ್ಥೀವ ಶರೀರವನ್ನು ಕೊಂಡಯ್ಯಲಾಗುತ್ತಿದೆ.
ಇದನ್ನೂ ಓದಿ: ಚಿರು-ಚೈತನ್ಯ ಹೊಸ ದಾಖಲೆ ಮಾಡಿದ್ದರು!
ಚಿರು ಅವರ ಪಾರ್ಥೀವ ಶರೀರವನ್ನು ಮೆರವಣಿಗೆಯಲ್ಲಿ ಕೊಂಡಯ್ಯಲಾಗುತ್ತಿದ್ದು, ಅವರ ಅಂತಿಮ ದರ್ಶನ ಪಡೆಯುವುದಕ್ಕೆ ಜನ ರಸ್ತೆಯ ಎರಡೂ ಕಡೆಗಳಲ್ಲಿ ಸಾಲುಗಟ್ಟಿ ನಿಂತಿದ್ದಾರೆ. ಇನ್ನು ಚಿರಂಜೀವಿ ಅವರ ಹಲವು ಅಭಿಮಾನಿಗಳು ಸಹ ಪಾರ್ಥೀವ ಶರೀರ ಇರುವ ವ್ಯಾನ್ ಜತೆಗೆ ಪ್ರಯಾಣ ಮಾಡುತ್ತಿದ್ದಾರೆ.
ಚಿರಂಜೀವಿ ಅವರ ಅಂತ್ಯಕ್ರಿಯೆಗೆ ಸಾರ್ವಜನಕರಿಗೆ ಪ್ರವೇಶ ನಿರ್ಬಂಧ ಮಾಡಲಾಗಿದೆ. ಕುಟುಂಬವರ್ಗದವರು, ಮಾಧ್ಯಮಗಳು, ಗಣ್ಯರನ್ನು ಹೊರತುಪಡಿಸಿ ಮಿಕ್ಕಂತೆ ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ. ಇನ್ನು ಈ ಪ್ರದೇಶವು ರಾಮನಾಗರ ಜಿಲ್ಲೆ ವ್ಯಾಪ್ತಿಗೆ ಬರಲಿದ್ದು, ರಾಮನಗರದ ಪೊಲೀಸರು ಸೂಕ್ತ ಬ್ಯಾರಿಕೇಡ್ಗಳನ್ನು ಹಾಕಿ ಬಂದೋಬಸ್ತ್ ಮಾಡಿದ್ದಾರೆ.
ಇದನ್ನೂ ಓದಿ: ಚಿರು ಸಾವು ಕಂಡು ನಿನ್ನೆಯಿಂದ ಹುಚ್ಚನಂತಾಗಿರುವೆ: ಜಗ್ಗೇಶ್
ಈಗಾಗಲೇ, ಅಂತ್ಯಸಂಸ್ಕಾರದಲ್ಲಿ ಭಾಗವಹಿಸುವ ಕುಟುಂಬಸ್ಥರು ಹಾಗೂ ಗಣ್ಯರಿಗಾಗಿ ಪೆಂಡಲ್ ವ್ಯವಸ್ಥೆ ಮಾಡಲಾಗ್ತಿದೆ. ಮಿಕ್ಕಂತೆ ಫಾರ್ಮ್ ಹೌಸ್ನ ಒಳ ಭಾಗದಲ್ಲಿ ಅಂತ್ಯ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಈಗಾಗಲೇ ಎಂಟು ಜನ ಕೆಲಸಗಾರರು ಗುಂಡಿ ತೆಗೆಯುವ ಕೆಲಸದಲ್ಲಿ ತೊಡಗಿದ್ದಾರೆ.
VIDEO| ಚಿರು ಲಾಸ್ಟ್ ಟಿಕ್ಟಾಕ್ ಇದು; ನಿಧನದ ಬಳಿಕ ಫಾಲೋವರ್ಸ್ ದ್ವಿಗುಣ!