ಚಿತ್ರದುರ್ಗ: ಕರೊನಾ ಜಾಗೃತಿಗಾಗಿ ಚಿತ್ರದುರ್ಗ ಜಿಲ್ಲಾದ್ಯಂತ ಸಂಚರಿಸಲು ಆರೋಗ್ಯ ಇಲಾಖೆ ಸಿದ್ಧಪಡಿಸಿರುವ ವಿಶೇಷ ವಾಹನಕ್ಕೆ ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಶುಕ್ರವಾರ ಚಾಲನೆ ನೀಡಿದರು.
ಡಿಎಚ್ಒ ಡಾ.ಸಿ.ಎಲ್.ಪಾಲಾಕ್ಷ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಿ.ಚಿದಾನಂದಪ್ಪ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಎಸ್.ಆನಂದ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಬಿ.ಪೂಜಾರ್ ಮತ್ತಿತರರು ಇದ್ದರು.