ಚಿತ್ರದುರ್ಗ: ಐಮಂಗಲ ಪೊಲೀಸ್ ತರಬೇತಿ ಶಾಲೆ ಕವಾಯಿತು ಮೈದಾನದಲ್ಲಿ ಒಂದನೇ ತಂಡದ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ಗಳ ಮತ್ತು ಕೆಎಸ್ಐಎಸ್ಎಫ್ ಕಾನ್ಸ್ಟೇಬಲ್ಗಳ ನಿರ್ಗಮನ ಪಥ ಸಂಚಲನ ಮಾರ್ಚ್ 6ರ ಬೆಳಗ್ಗೆ 8 ಗಂಟೆಗೆ ಆಯೋಜಿಸಲಾಗಿದೆ.
ಬೆಂಗಳೂರಿನ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಡಾ.ಎಸ್.ಪರಶಿವಮೂರ್ತಿ ಅವರು ಪಥ ಸಂಚಲನ ಪರಿವೀಕ್ಷಣೆ ಮತ್ತು ಬಹುಮಾನ ವಿತರಣೆ ಮಾಡುವರು. ಬೆಂಗಳೂರು ತರಬೇತಿ ಪೊಲೀಸ್ ಮಹಾನಿರೀಕ್ಷಕ ಪಿ.ಹರಿಶೇಖರನ್, ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲ ಪಿ.ಪಾಪಣ್ಣ ಉಪಸ್ಥಿತರಿರುತ್ತಾರೆ.