ಚಿತ್ರದುರ್ಗ: ಬೆಂಗಳೂರಿನ ನಂದಿ ಮೈದಾನದಲ್ಲಿ ಫೆ.16ರಂದು ನಡೆಯಲಿರುವ ಶಿವಯೋಗ ಸಂಭ್ರಮ, ಅಸಂಖ್ಯಪ್ರಮಥ ಗಣಮೇಳ ಹಾಗೂ ಸರ್ವ ಶರಣರ ಸಮ್ಮೇಳನದ ಪೂರ್ವ ಸಿದ್ಧತೆಯನ್ನು ಶ್ರೀ ಶಿವಮೂರ್ತಿ ಮುರುಘಾ ಶರಣರು ಬುಧವಾರ ಪರಿಶೀಲಿಸಿದರು.
ಹೊಸದುರ್ಗ ಕುಂಚಿಟಿಗ ಮಠದ ಶ್ರೀ ಶಾಂತವೀರ ಸ್ವಾಮೀಜಿ, ಅಥಣಿ ಗಚ್ಚಿನಮಠದ ಶ್ರೀ ಶಿವಬಸವ ಸ್ವಾಮೀಜಿ, ಶಿರಸಿ ರುದ್ರದೇವರ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಹಾವೇರಿ ಹೊಸ ಮಠದ ಶ್ರೀ ಬಸವಶಾಂತಲಿಂಗ ಸ್ವಾಮೀಜಿ, ವನಕಲ್ ಮಠದ ಶ್ರೀ ಬಸವರಮಾನಂದ ಸ್ವಾಮೀಜಿ, ಮುಖಂಡರಾದ ಹನುಮಲಿ ಷಣ್ಮುಖಪ್ಪ, ಅರುಣ್, ಸೋಮಣ್ಣ, ಲಿಂಗಮೂರ್ತಿ, ಎನ್.ಜಿ.ಶ್ರೀನಿವಾಸ್, ಅರುಣ್ಕುಮಾರ್ ಮತ್ತಿತರರು ಇದ್ದರು.