More

    ಲಂಚಕ್ಕೆ ಬೇಡಿಕೆ ಇಟ್ಟು ಎಸಿಬಿ ಬಲೆಗೆ ಬಿದ್ದ ತೋಟಗಾರಿಕೆ ಇಲಾಖೆಯ ತೋಟಯ್ಯ

    ಚಿತ್ರದುರ್ಗ: ಕೃಷಿ ಹೊಂಡದ ಚೆಕ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಎಸಿಬಿ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.

    ಚಿತ್ರದುರ್ಗ ನಗರದ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ತೋಟಯ್ಯ, ಕೃಷಿ ಹೊಂಡಕ್ಕಾಗಿ 2 ಲಕ್ಷ 80 ಸಾವಿರ ಚೆಕ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ. ಅರಬಗಟ್ಟ ಗ್ರಾಮದ ರೈತ ಕೃಷ್ಣ ನಾಯ್ಕ್ ಬಳಿ 1 ಲಕ್ಷ 40 ಸಾವಿರ ಅಂದರೆ ಅದರ ಅರ್ಧ ಭಾಗದಷ್ಟು ಲಂಚದ ಹಣಕ್ಕೆ ಬೇಡಿಕೆಯಿಟ್ಟಿದ್ದ ಅಧಿಕಾರಿ ತೋಟಯ್ಯ, ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್​ ಆಗಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.

    ಎಸಿಬಿ ಡಿವೈಎಸ್ಪಿ ಉಮೇಶ, ಸಿಪಿಐ ಪ್ರಭು, ಸಿಪಿಐ ಉಮೇಶ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಭ್ರಷ್ಟ ಅಧಿಕಾರಿಯನ್ನು ಖೆಡ್ಡಾಕೆ ಬೀಳಿಸಿದ್ದಾರೆ.

    ಡಬಲ್ ರೈಡ್ ನಿಷೇಧಕ್ಕೆ ಜನ ವಿರೋಧ; ಆದೇಶ ಹಿಂಪಡೆದ ಪೊಲೀಸ್ ಕಮೀಷನರ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts