More

    ಯುವ ಪೀಳಿಗೆಗೆ ತಿಳಿಸಿ ಶಿವಾಜಿ ಪರಾಕ್ರಮ

    ಚಿತ್ರದುರ್ಗ: ಮೊಘಲರು, ಪರಕೀಯರನ್ನು ಮೆಟ್ಟಿನಿಂತ ವೀರಪುರುಷ ಛತ್ರಪತಿ ಶಿವಾಜಿ ಮಹಾರಾಜರ ಇತಿಹಾಸ ಮತ್ತು ಪರಾಕ್ರಮವನ್ನು ಪ್ರತಿ ಮನೆಗೆ, ಯುವ ಪೀಳಿಗೆಗೆ ತಿಳಿಸಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಸಲಹೆ ನೀಡಿದರು.

    ನಗರದ ತರಾಸು ರಂಗಮಂದಿರದಲ್ಲಿ ಕರ್ನಾಟಕ ಕ್ಷತ್ರೀಯ ಮರಾಠ ಪರಿಷತ್ ಜಿಲ್ಲಾ ಘಟಕ ಭಾನುವಾರ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ 395ನೇ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದರು.

    ಶೌರ್ಯ ಮತ್ತು ಸಾಹಸ ಪರಾಕ್ರಮಕ್ಕೆ ಹೆಸರಾಗಿದ್ದ ಶಿವಾಜಿ ಮಹಾರಾಜರ ವಿಚಾರಗಳನ್ನು ಮುಂದಿನ ಪೀಳಿಗೆಗೆ ತಿಳಿಸಬೇಕಾಗಿದೆ. ಪರಾಕ್ರಮಿಯಾಗಿದ್ದ ಶಿವಾಜಿ ಅವರಲ್ಲಿ ಯುದ್ಧದ ಚಾಣಾಕ್ಷತೆ ಇತ್ತು. ಅದಕ್ಕಾಗಿ ಅವರ ಇತಿಹಾಸವನ್ನು ಜಗತ್ತಿಗೆ ಪರಿಚಯಿಸುವಂತಹ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಮಾಡುತ್ತಿದ್ದಾರೆಂದು ಹರ್ಷ ವ್ಯಕ್ತಪಡಿಸಿದರು.

    ಕೆಳಗೋಟೆಯಲ್ಲಿರುವ ಅಂಬಾ ಭವಾನಿ ದೇವಸ್ಥಾನದ ಆವರಣದಲ್ಲಿ ನಿರ್ಮಾಣಗೊಳ್ಳುತ್ತಿರುವ ಸಮುದಾಯ ಭವನ ಅರ್ಧಕ್ಕೇ ನಿಂತಿದ್ದು, ಸರ್ಕಾರದಿಂದ ಅನುದಾನ ತಂದು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು.

    ಕರ್ನಾಟಕ ಕ್ಷತ್ರೀಯ ಮರಾಠ ಪರಿಷತ್ ರಾಜ್ಯ ಖಜಾಂಚಿ ಹಾಗೂ ಪ್ರಭಾರ ಪ್ರಧಾನ ಕಾರ್ಯದರ್ಶಿ ಟಿ.ಆರ್.ವೆಂಕಟರಾವ್ ಚವ್ಹಾಣ್, ವ್ಯವಸ್ಥಾಪಕ ಶ್ರೀನಿವಾಸ್ ರಾವ್ ಮಗರ್, ಜಿಲ್ಲಾಧ್ಯಕ್ಷ ಸುರೇಶ್‌ರಾವ್ ಜಾದವ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಜಾದವ್, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯೆ ಉಷಾಬಾಯಿ ಗೋಪಾಲ್ ರಾವ್ ಜಾದವ್ ಇತರರಿದ್ದರು. ಪ್ರತಿಭಾವಂತ ಮಕ್ಕಳಿಗೆ ವಿದ್ಯಾರ್ಥಿವೇತನ, ಅಂಗವಿಕಲರಿಗೆ ಹಾಗೂ ವೃದ್ಧರಿಗೆ ಸಹಾಯಧನ ವಿತರಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts