More

    ವಿವಿಧೆಡೆ ಅಂಬೇಡ್ಕರ್ ಜಯಂತಿ

    ಚಿತ್ರದುರ್ಗ: ನಗರದ ವಿವಿಧೆಡೆ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಎ.ಮುರುಳಿ, ಅಂಬೇಡ್ಕರ್ ವಿಚಾರಧಾರೆಗಳನ್ನು ಬಿಜೆಪಿ ಚಾಚೂ ತಪ್ಪದೇ ಪಾಲಿಸುತ್ತಿದೆ ಎಂದರು.

    ವಿಭಾಗೀಯ ಪ್ರಭಾರಿ ಜಿ.ಎಂ.ಸುರೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಸಿದ್ದಾಪುರ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಬಿ.ಸಿ. ಹನುಮಂತೇಗೌಡ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್ ಯಾದವ್, ಮುಖಂಡರಾದ ನಾಗರಾಜ್‌ಬೇದ್ರೆ, ದಗ್ಗೆ ಶಿವಪ್ರಕಾಶ್, ಶಿವಣ್ಣಾಚಾರ್, ಸಂಪತ್‌ಕುಮಾರ್, ಶಶಿಧರ್, ಎಸ್.ಅನೀತ್, ಶಂಭು, ಕಿರಣ್‌ಕುಮಾರ್ ಮತ್ತಿತರರು ಇದ್ದರು.

    ಕಾಂಗ್ರೆಸ್ ಕಚೇರಿ: ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಪಕ್ಷದ ಜಿಲ್ಲಾಧ್ಯಕ್ಷ ಎಂ.ಕೆ. ತಾಜ್‌ಪೀರ್, ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಜಿ.ಎಸ್.ಮಂಜುನಾಥ್, ಮುಖಂಡರಾದ ಮೆಹಬೂಬ್ ಪಾಷ, ಫಾತ್ಯರಾಜನ್, ಡಿ.ಎನ್.ಮೈಲಾರಪ್ಪ, ಆರ್.ಶೇಷಣ್ಣಕುಮಾರ್, ಎನ್.ಡಿ.ಕುಮಾರ್, ಪೈಲ್ವಾನ್ ತಿಪ್ಪೇಸ್ವಾಮಿ, ರವೀಂದ್ರ ಮತ್ತಿತರರು ಇದ್ದರು.

    ದಲಿತ ಸಂಘರ್ಷ ಸಮಿತಿ: ನಗರದ ಅಂಬೇಡ್ಕರ್ ಪ್ರತಿಮೆಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಡಾ.ಎನ್.ಮೂರ್ತಿ)ಜಿಲ್ಲಾ ಸಮಿತಿ ಪ್ರಮುಖರು ಮಾಲಾರ್ಪಣೆ ಮಾಡಿದರು. ಸಮಿತಿ ಜಿಲ್ಲಾಧ್ಯಕ್ಷ ಸಿ.ಎಚ್.ಮಂಜುನಾಥ್, ಮುಖಂಡರಾದ ಎನ್.ಮಲ್ಲಿಕಾರ್ಜುನ್, ಸುಪ್ರೀಂ ಚಕ್ರವರ್ತಿ, ಎಚ್.ಭೀಮಪ್ಪ, ಕೆ.ರಂಗಪ್ಪ ಮತ್ತಿತರರು ಇದ್ದರು.

    ಪ್ರೇರಣಾ ಸೇವಾ ಸಮಿತಿ: ಚಿತ್ರದುರ್ಗದ ಪ್ರೇರಣಾ ಸೇವಾ ಸಮಿತಿಯಿಂದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಸಮಿತಿ ಅಧ್ಯಕ್ಷ ಟಿ.ಮಂಜುನಾಥ್ ಮತ್ತು ಬಳಗದವರು ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿದರು. ಶ್ರೀನಿವಾಸ್, ಸಂಪತ್, ದೇವರಾಜ್, ಪ್ರಕಾಶ್,ಪ್ರವೀಣ್, ಪುನೀತ್ ಮತ್ತಿತರರು ಇದ್ದರು.

    ಮಾದಿಗ ಯುವ ಸೇನೆ: ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ರಾಜ್ಯಮಾದಿಗ ಯುವ ಸೇನೆ ಕಾರ‌್ಯಕರ್ತರು ಅಂಬೇಡ್ಕರ್ ಜಯಂತಿ ಆಚರಿಸಿದರು. ಮುಖಂಡರಾದ ಬಿ.ರಾಜಪ್ಪ, ಶಿವಕುಮಾರ್, ನಾಗರಾಜ ಟಿ.ಪಾಲವ್ವನಹಳ್ಳಿ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts