ಚಿತ್ರದುರ್ಗ: ಜಿಲ್ಲಾ ಸಂಚಾರಿ ಶಸ್ತ್ರ ಚಿಕಿತ್ಸಾ ಘಟಕ ಜಿಲ್ಲಾ ಆಸ್ಪತ್ರೆ ಕೊಠಡಿ ಸಂಖ್ಯೆ 51ರಲ್ಲಿ ನೇತ್ರ ಚಿಕಿತ್ಸಾ ಉಚಿತ ಶಿಬಿರವನ್ನು ಹಮ್ಮಿಕೊಂಡಿದೆ.
ನೇತ್ರ ತಜ್ಞರಾದ ಡಾ.ಆರ್.ಕೃಷ್ಣಮೂರ್ತಿ, ಡಾ.ಐ.ಎಂ.ಶಿಲ್ಪಾ, ಡಾ.ಸಂದೀಪ್, ಡಾ.ಪ್ರದೀಪ್ ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ಕಣ್ಣಿನ ಪೊರೆಯಿರುವ ಅರ್ಹರಿಗೆ ಶಸ್ತ್ರ ಚಿಕಿತ್ಸೆ ನಡೆಸಿ ಐಓಎಲ್ ಅಳವಡಿಸಲಾಗುವುದು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಚ್.ಜೆ.ಬಸವರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.